ಜಾಗೃತಿ ಅರಿವು ಸಪ್ತಾಹ – 2021
ಬೆಂಗಳೂರು, ಅಕ್ಟೋಬರ್ 26 (ಕರ್ನಾಟಕ ವಾರ್ತೆ):
ಭ್ರಷ್ಟಾಚಾರದ ವಿರುದ್ದ ಜಾಗೃತಿ ಮೂಡಿಸಲು “ಜಾಗೃತಿ ಅರಿವು ಸಪ್ತಾಹ – 2021”ನ್ನು (Vigilance Awareness Week - 2021) ದಿನಾಂಕ: 26-10-2021 ರಿಂದ 01-11-2021ರ ವರೆಗೆ ಆಚರಿಸಲಾಗುತ್ತಿದೆ. ಇಂದು ವಿಧಾನಸೌಧದ ಸಮ್ಮೇಳ ಸಭಾಂಗಣದಲ್ಲಿ ಸರ್ಕಾರದ ಮುಖ್ಯ ಕಾರ್ಯದರ್ಶಿಗಳಾದ ಪಿ. ರವಿಕುಮಾರ್ ಅವರು ಸಚಿವಾಲಯದ ಅಧಿಕಾರಿ ಮತ್ತು ಸಿಬ್ಬಂದಿ ವರ್ಗದವರಿಗೆ ಪ್ರತಿಜ್ಞಾ ವಿಧಿ ಭೋಧಿಸಿದರು.
ಈ ವರ್ಷದ ಜಾಗೃತಿ ಅರಿವು ಸಪ್ತಾಹದ ವಿಷಯವು “Independent India@75:self reliance with Integrity” ಆಗಿರುತ್ತದೆ. ಈ ಜಾಗೃತಿ ಅರಿವಿನ ಸಪ್ತಾಹವನ್ನು ಪರಿಣಾಮಕಾರಿಯಾಗಿ ಆಚರಿಸಲು ಮುಖ್ಯ ಕಾರ್ಯದರ್ಶಿಗಳು ಈ ಸಂದರ್ಭದಲ್ಲಿ ಕರೆ ನೀಡಿದರು.
ಇದೇ ಸಮಯದಲ್ಲಿ ಸಿಬ್ಬಂದಿ ಮತ್ತು ಆಡಳಿತ ಸ್ಮಧಾರಣಾ ಇಲಾಖೆಯ ಕಾರ್ಯದರ್ಶಿಗಳಾದ ಪಿ. ಹೇಮಲತಾ ಸೇದಿದಂತೆ ಸಚಿವಾಲಯದ ಅಧಿಕಾರಿಗಳು ಹಾಗೂ ಸಿಬ್ಬಂದಿಗಳು ಪ್ರತಿಜ್ಞಾ ವಿಧಿಯನ್ನು ಸ್ವೀಕರಿಸಿದರು.
Post a Comment