ಪ್ರಧಾನ ಮಂತ್ರಿಯವರ ಕಛೇರಿ
ವಾಲ್ಮೀಕಿ ಜಯಂತಿಯಂದು ಮಹರ್ಷಿ ವಾಲ್ಮೀಕಿಗೆ ನಮನ ಸಲ್ಲಿಸಿದ ಪ್ರಧಾನಮಂತ್ರಿ
Posted On: 20 OCT 2021 9:19AM by PIB Bengaluru
ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ವಾಲ್ಮೀಕಿ ಜಯಂತಿಯ ಸಂದರ್ಭದಲ್ಲಿ ಮಹರ್ಷಿ ವಾಲ್ಮೀಕಿ ಅವರಿಗೆ ನಮನ ಸಲ್ಲಿಸಿದ್ದಾರೆ.
ಟ್ವೀಟ್ ನಲ್ಲಿ ಪ್ರಧಾನಮಂತ್ರಿಯವರು, "ವಾಲ್ಮೀಕಿ ಜಯಂತಿಯ ವಿಶೇಷ ಸಂದರ್ಭದಲ್ಲಿ ಮಹರ್ಷಿ ವಾಲ್ಮೀಕಿ ಅವರಿಗೆ ನಾನು ಗೌರವ ಪೂರ್ವಕವಾಗಿ ನಮಿಸುತ್ತೇನೆ. ನಮ್ಮ ಶ್ರೀಮಂತ ಗತಕಾಲ ಮತ್ತು ಭವ್ಯವಾದ ಸಂಸ್ಕೃತಿಯನ್ನು ವಿವರಿಸುವಲ್ಲಿ ಅವರ ಪ್ರಮುಖ ಕೊಡುಗೆಗಳನ್ನು ನಾವು ಸ್ಮರಿಸುತ್ತೇವೆ. ಸಾಮಾಜಿಕ ಸಬಲೀಕರಣಕ್ಕೆ ಅವರು ನೀಡಿದ ಒತ್ತು ನಮಗೆ ಸದಾ ಸ್ಫೂರ್ತಿ ನೀಡುತ್ತದೆ." ಎಂದು ತಿಳಿಸಿದ್ದಾರೆ.
Post a Comment