ಅನಾರೋಗ್ಯದಿಂದ ಬಳಲುತ್ತಿದ್ದ ಪಂಜಾಬ್‌ ಮೂಲದ ಯುವಕ Ukraine ನಲ್ಲಿ ಸಾವು

ಯುದ್ದಪೀಡಿತ ಉಕ್ರೇನ್ʼನಲ್ಲಿ ಮತ್ತೋರ್ವ ಭಾರತೀಯ ವಿದ್ಯಾರ್ಥಿ(Indian Student) ಸಾವನ್ನಪ್ಪಿರುವುದು ದೃಢಪಟ್ಟಿದೆ. ಅನಾರೋಗ್ಯದಿಂದ ಬಳಲುತ್ತಿದ್ದ ಪಂಜಾಬ್‌ ಮೂಲದ ಯುವಕ ಚಂದನ್ ಇಂದು ಪಾರ್ಶ್ವವಾಯು(Paralysis)ನಿಂದ ಮೃತ ಪಟ್ಟಿದ್ದಾನೆ ಎನ್ನಲಾಗ್ತಿದೆ.ಚಂದನ್ ಜಿಂದಾಲ್ (22) ಅನ್ನೋ ಯುವಕ ವಿನ್ನಿಟ್ಸಿಯಾ ನ್ಯಾಷನಲ್ ಪೈರೋಗೊವ್, ಮೆಮೋರಿಯಲ್ ಮೆಡಿಕಲ್ ಯೂನಿವರ್ಸಿಟಿ, ವಿನ್ನಿಟ್ಸಿಯಾ ಉಕ್ರೇನ್ʼನಲ್ಲಿ ಅಧ್ಯಯನ ಮಾಡುತ್ತಿದ್ದನು. ಇನ್ನು ಚಂದನ್‌ ಏಕಾಏಕಿ ಅನಾರೋಗ್ಯಕ್ಕೆ ಒಳಗಾಗಿದ್ದು, ವಿನ್ನಿಟ್ಸಿಯಾದ ತುರ್ತು ಆಸ್ಪತ್ರೆಯಲ್ಲಿ ದಾಖಲಿಸಲಾಗಿದೆ. ಮೆದುಳಿನಲ್ಲಿ ಇಸ್ಚೆಮಿಯಾ ಸ್ಟ್ರೋಕ್ʼನಿಂದ ಬಳಲುತ್ತಿದ್ದ ಚಂದನ್‌ನನ್ನ ನಂತ್ರ ಐಸಿಯುಗೆ ಸ್ಥಳಾಂತರಿಸಲಾಯಿತು. ಆದ್ರೆ, ಇಂದು ಚಿಕಿತ್ಸೆ ಫಲಕಾರಿಯಾಗದೆ ಕೊನೆಯುಸಿರೆಳೆದಿದ್ದಾನೆ ಎನ್ನಲಾಗ್ತಿದೆ.

ಇನ್ನು ಅಂತಿಮ ಸಂಸ್ಕಾರಕ್ಕಾಗಿ ಮಗನ ಮೃತದೇಹವನ್ನ ತರಸಿ ಕೊಡುವಂತೆ ಮೃತ ಚಂದನ್‌ ತಂದೆ ಕೇಂದ್ರ ಸರಕಾರಕ್ಕೆ ಪತ್ರ ಬರೆದಿದ್ದಾರೆ.

Post a Comment

Previous Post Next Post