ಇತ್ತ ವಿರೋಧ ಪಕ್ಷ ಕಾಂಗ್ರೆಸ್ ಏನು ಮಾಡಿದೆ....

[14/04, 12:11 PM] +91 90088 29855: ಸಂವಿಧಾನ ಶಿಲ್ಪಿ ಡಾ. ಬಾಬಾಸಾಹೇಬ್ ಅಂಬೇಡ್ಕರ್ ಅವರ ಜಯಂತಿ ಅಂಗವಾಗಿ ಎಐಸಿಸಿ ಪ್ರಧಾನ ಕಾರ್ಯದರ್ಶಿ ರಣದೀಪ್ ಸಿಂಗ್ ಸುರ್ಜೆವಾಲ, ಕೆಪಿಸಿಸಿ ಅಧ್ಯಕ್ಷ ಡಿ.ಕೆ. ಶಿವಕುಮಾರ್, ವಿಧಾನಸಭೆ ವಿರೋಧ ಪಕ್ಷದ ನಾಯಕ ಸಿದ್ದರಾಮಯ್ಯ ಅವರು ರೇಸ್ ಕೋರ್ಸ್ ರಸ್ತೆಯ ಕಾಂಗ್ರೆಸ್ ಭವನದಲ್ಲಿ ಅಂಬೇಡ್ಕರ್ ಅವರ ಭಾವಚಿತ್ರಕ್ಕೆ ಪುಷ್ಪನಮನ ಸಲ್ಲಿಸಿದರು. ಕೆಪಿಸಿಸಿ ಕಾರ್ಯಾಧ್ಯಕ್ಷರಾದ ಸಲೀಂ ಅಹ್ಮದ್, ಧ್ರುವನಾರಾಯಣ್, ಪ್ರದೇಶ ಮಹಿಳಾ ಕಾಂಗ್ರೆಸ್ ಅಧ್ಯಕ್ಷೆ ಪುಷ್ಪಾ ಅಮರನಾಥ್ ಮತ್ತಿತರರು ಇದ್ದರು.
[14/04, 12:41 PM] +91 90088 29855: ಗುತ್ತಿಗೆದಾರ ಸಂತೋಷ್ ಪಾಟೀಲ್ ಅವರ ಆತ್ಮಹತ್ಯೆಗೆ ಕಾರಣರಾಗಿರುವ ಸಚಿವ ಈಶ್ವರಪ್ಪ ಅವರನ್ನು!ಬಂಧಿಸುವಂತೆ ಒತ್ತಾಯಿಸಿ ಸಿಎಂ ಬಸವರಾಜ ಬೊಮ್ಮಾಯಿ ಅವರ ಮನೆಗೆ ಮುತ್ತಿಗೆ ಹಾಕಲು ಹೊರಟ ಎಐಸಿಸಿ ಪ್ರಧಾನ ಕಾರ್ಯದರ್ಶಿ ರಣದೀಪ್ ಸಿಂಗ್ ಸುರ್ಜೆವಾಲ, ಕೆಪಿಸಿಸಿ ಅಧ್ಯಕ್ಷ ಡಿ.ಕೆ. ಶಿವಕುಮಾರ್, ವಿಧಾನಸಭೆ ವಿರೋಧ ಪಕ್ಷದ ನಾಯಕ ಸಿದ್ದರಾಮಯ್ಯ, ಪ್ರಚಾರ ಸಮಿತಿ ಅಧ್ಯಕ್ಷ ಎಂ.ಬಿ.ಪಾಟೀಲ್, ರಾಷ್ಟ್ರೀಯ ಯುವ ಕಾಂಗ್ರೆಸ್ ಅಧ್ಯಕ್ಷ ಬಿ.ವಿ. ಶ್ರೀನಿವಾಸ್ ಮತ್ತಿತರ ಕಾಂಗ್ರೆಸ್ ಮುಖಂಡರನ್ನು ಪೊಲೀಸರು ರೇಸ್ ಕೋರ್ಸ್ ರಸ್ತೆಯಲ್ಲಿ ಗುರುವಾರ ಬಂಧಿಸಿದರು. ಕೆಪಿಸಿಸಿ ಕಾರ್ಯಾಧ್ಯಕ್ಷರಾದ ರಾಮಲಿಂಗಾ ರೆಡ್ಡಿ, ಸಲೀಂ ಅಹ್ಮದ್, ಧ್ರುವನಾರಾಯಣ್, ಶಾಸಕರಾದ ಪ್ರಿಯಾಂಕ್ ಖರ್ಗೆ, ಪ್ರದೇಶ ಮಹಿಳಾ ಕಾಂಗ್ರೆಸ್ ಅಧ್ಯಕ್ಷೆ ಪುಷ್ಪಾ ಅಮರನಾಥ್, ಗೋವಿಂದರಾಜ್ ಮತ್ತಿತರರು ಬಂಧನಕ್ಕೆ ಒಳಗಾದರು.
[14/04, 1:04 PM] +91 90088 29855: *ಕಾಂಗ್ರೆಸ್ ಭವನದಲ್ಲಿ ಡಿ.ಕೆ. ಶಿವಕುಮಾರ್ ಅವರು ಮಾಧ್ಯಮಗಳಿಗೆ ನೀಡಿದ ಪ್ರತಿಕ್ರಿಯೆ:*

ಇಂದು ಬಾಬಾ ಸಾಹೇಬ್ ಡಾ. ಬಿ.ಆರ್. ಅಂಬೇಡ್ಕರ್ ಅವರ ಜನ್ಮದಿನ ಆಚರಣೆ ಮಾಡಲಾಗುತ್ತಿದ್ದು, ಇಂದು ಮಧ್ಯಾಹ್ನ 3 ಗಂಟೆಗೆ ಪ್ರದೇಶ ಕಾಂಗ್ರೆಸ್ ವತಿಯಿಂದ ಮಹದೇವಪುರದಲ್ಲಿ ಕಾರ್ಯಕ್ರಮ ಹಮ್ಮಿಕೊಳ್ಳಲಾಗಿದೆ.

ಪ್ರಜಾಪ್ರಭುತ್ವ, ಸಂವಿಧಾನ, ಬಾಬಾ ಸಾಹೇಬ್ ಅಂಬೇಡ್ಕರ್ ಅವರು ಹೇಳಿಕೊಟ್ಟ ಭ್ರಷ್ಟಾಚಾರ ನಿರ್ಮೂಲನ ಪಾಠ, ಪಕ್ಷ ಹಾಗೂ ದೇಶದ ನೀತಿಗೆ ಅನುಗುಣವಾಗಿ ಈ ಕಾರ್ಯಕ್ರಮ ಹಮ್ಮಿಕೊಳ್ಳಲಾಗಿದೆ.
ಅಂಬೇಡ್ಕರ್ ಅವರ ಭಾವಚಿತ್ರಕ್ಕೆ ನಮನ ಸಲ್ಲಿಸಿ, ಮುಖ್ಯಮಂತ್ರಿಗಳ ನಿವಾಸಕ್ಕೆ ಘೆರಾವ್ ಹಾಕಲು ನಿರ್ಧರಿಸಿದ್ದೇವೆ. ಈ ಹೋರಾಟವನ್ನು ದೊಡ್ಡ ಮಟ್ಟದಲ್ಲಿ ಮಾಡಬೇಕಾದ ಅನಿವಾರ್ಯತೆ ಇದ್ದರೂ ಕೋರ್ಟ್ ನಿರ್ಬಂಧವಿದೆ. ಆದರೂ ದೇಶ ಹಾಗೂ ರಾಜ್ಯಕ್ಕೆ ನ್ಯಾಯ ಒದಗಿಸಿ, ಭ್ರಷ್ಟ ಬಿಜೆಪಿ ಸರ್ಕಾರವನ್ನು ಜನರು ಕಿತ್ತೊಗೆಯಬೇಕಿದೆ. ಹೀಗಾಗಿ ಜನರಲ್ಲಿ ಜಾಗೃತಿ ಮೂಡಿಸುವುದು ನಮ್ಮ ಕರ್ತವ್ಯವಾಗಿದೆ.

ಮುಖ್ಯಮಂತ್ರಿಗಳು ಈ ಎಲ್ಲ ವಿಚಾರದಲ್ಲೂ ಭಾಗಿಯಾಗಿದ್ದಾರೆ ಎಂದು ನಾವು ನೇರ ಆರೋಪ ಮಾಡಬೇಕಾಗಿದೆ. ಭ್ರಷ್ಟಾಚಾರ ನಿಗ್ರಹ ಕಾಯ್ದೆ ಇದ್ದರೂ ಈ ಕಾಯ್ದೆ ಅಡಿಯಲ್ಲಿ ಪ್ರಕರಣ ದಾಖಲಿಸಿಲ್ಲ. ಮೃತನ ಮರಣ ಸಂದೇಶ, ಮೃತನ ಸಹೋದರ, ಪತ್ನಿ, ತಾಯಿ ಎಲ್ಲರೂ ಭ್ರಷ್ಟಾಚಾರ ಕಿರುಕುಳದ ಆರೋಪ ಮಾಡಿದ್ದಾರೆ. ಅಂಗೈ ಉಣ್ಣಿಗೆ ಕನ್ನಡಿ ಬೇಕೇ ಎನ್ನುವಂತೆ ಆರೋಪಿ ಸಚಿವರಿಂದಾಗಿಯೇ ಈ ಪ್ರಕರಣ ನಡೆದಿವೆ. ಹೀಗಾಗಿ ಅವರ ವಿರುದ್ಧ ಭ್ರಷ್ಟಾಚಾರ ಆರೋಪದಡಿ ಪ್ರಕರಣ ದಾಖಲಿಸಿ ಬಂಧಿಸಬೇಕು, ಜತೆಗೆ ನ್ಯಾಯಾಲಯದ ಮೇಲ್ವಿಚಾರಣೆಯಲ್ಲಿ ಈ ತನಿಖೆ ನಡೆಯಬೇಕು ಎಂದು ಕಾಂಗ್ರೆಸ್ ಪಕ್ಷ ಒತ್ತಾಯಿಸುತ್ತದೆ.

ಇಂದು ಮುಖ್ಯಮಂತ್ರಿಗಳ ಮನೆಗೆ ಘೆರಾವ್ ಹಾಕಲಾಗುವುದು, ನಾಳೆಯಿಂದ ರಾಜ್ಯಾದ್ಯಂತ ನಮ್ಮ ಹೋರಾಟ ಮುಂದುವರಿಸಲಾಗುವುದು.
[14/04, 1:32 PM] +91 90088 29855: *ಎಐಸಿಸಿ ಪ್ರಧಾನ ಕಾರ್ಯದರ್ಶಿ ರಣದೀಪ್ ಸಿಂಗ್ ಸುರ್ಜೆವಾಲ ಅವರ ಮಾಧ್ಯಮ ಪ್ರತಿಕ್ರಿಯೆ:* 

‘ನಾವೆಲ್ಲರೂ ಇಲ್ಲಿ ಬಾಬಾ ಸಾಹೇಬ್ ಅಂಬೇಡ್ಕರ್ ಅವರ 131ನೇ ಜಯಂತಿ ಹಿನ್ನೆಲೆಯಲ್ಲಿ ಅವರಿಗೆ ಗೌರವ ಸಲ್ಲಿಸಲು ಸೇರಿದ್ದೇವೆ. ಆದರೆ ಬಿಜೆಪಿ ಸರ್ಕಾರ ರಾಜ್ಯದಲ್ಲಿ ಅಂಬೇಡ್ಕರ್ ಅವರ ಸಂವಿಧಾನದ ಮೇಲೆ ದಾಳಿ ಮಾಡುತ್ತಿದೆ. ಸಂವಿಧಾನದ ಮೂಲಭೂತ ಉದ್ದೇಶಗಳನ್ನು ನಾಶ ಮಾಡಲಾಗುತ್ತಿದೆ. ಹಿರಿಯ ಸಚಿವ ಈಶ್ವರಪ್ಪ ಕೊಲೆಯ ಆರೋಪ ಹೊತ್ತಿದ್ದು, ಎಫ್ಐಆರ್ ದಾಖಲಾಗಿದೆ. ದೇವರಾದ ಬಸವಣ್ಣನ ಮಗನಂತಿದ್ದ ಸಂತೋಷ್ ಹತ್ಯೆಯಾಗಿದೆ. ಸಂವಿಧಾನದ ಹೆಸರಲ್ಲಿ ಪ್ರಮಾಣ ಮಾಡಿದ ಸಚಿವ ಕೊಲೆಯ ಆರೋಪ ಹೊತ್ತುಕೊಂಡಾಗ ಅಧಿಕಾರದಲ್ಲಿ ಮುಂದುವರಿಯಲು ಹೇಗೆ ಸಾಧ್ಯ? ಸಂವಿಧಾನದಲ್ಲಿ ಇದಕ್ಕೆ ಎಲ್ಲಿ ಅವಕಾಶ ಕಲ್ಪಿಸಿದೆ? ಅವರನ್ನು ಬಂಧಿಸಿ, ಜೈಲಿಗೆ ಹಾಕದಿರಲು ಹೇಗೆ ಸಾಧ್ಯ?

ಮುಖ್ಯಮಂತ್ರಿ ಬೊಮ್ಮಾಯಿ ಅವರು ಅಂಬೇಡ್ಕರ್ ಅವರ ಸಂವಿಧಾನವನ್ನು ಉಲ್ಲಂಘಿಸಿದ್ದು, ಈಶ್ವರಪ್ಪನವರು ಅಂಬೇಡ್ಕರ್ ಅವರ ಸಂವಿಧಾನಕ್ಕೆ ವಿರುದ್ಧವಾಗಿ ನಡೆದುಕೊಳ್ಳುತ್ತಿದ್ದಾರೆ. ಸಂವಿಧಾನದಲ್ಲಿ ಕಾನೂನು ಎಲ್ಲರಿಗೂ ಸಮಾನ ಎಂದು ಹೇಳಿದೆ. ಆದರೆ ಇಲ್ಲಿ ಕಾನೂನು ಎಲ್ಲರಿಗೂ ಸಮಾನವಾಗಿ ಉಳಿದಿಲ್ಲ. ಕಾನೂನಿನ ಪ್ರಕಾರ ಸಂತೋಷ್ ಪಾಟೀಲ್ ಅವರ ಕುಟುಂಬಕ್ಕೆ ನ್ಯಾಯ ಸಿಗುತ್ತಿಲ್ಲ. ಹೀಗಾಗಿ ಕಾಂಗ್ರೆಸ್ ಪಕ್ಷ ಇಂದಿನಿಂದ ‘ಭ್ರಷ್ಟಾಚಾರ ಮುಕ್ತ ಕರ್ನಾಟಕ ಮಿಷನ್ ನಡಿಗೆ’ ಹೋರಾಟ ಬೊಮ್ಮಾಯಿ ಅವರ ನಿವಾಸಕ್ಕೆ ಘೆರಾವ್ ಹಾಕುವ ಮೂಲಕ ಆರಂಭವಾಗಿದೆ. ಬೊಮ್ಮಾಯಿ ಅವರು ಭ್ರಷ್ಟಾಕಾರದ ರಕ್ಷಕನಾಗಿದ್ದು, ಆಮೂಲಕ ಅವರು ಭ್ರಷ್ಟಾಚಾರದ ಪಾಲುದಾರನಾಗಿ ನಿಂತಿದ್ದಾರೆ. ಇಲ್ಲದಿದ್ದರೆ ಭ್ರಷ್ಟ ಸಚಿವರನ್ನು ಯಾಕೆ ರಕ್ಷಿಸುತ್ತಿದ್ದಾರೆ. ಬೊಮ್ಮಾಯಿ ಅವರ ಸರ್ಕಾರ 40% ಕಮಿಷನ್ ಸರ್ಕಾರ ಎಂದು ಎಲ್ಲರಿಗೂ ತಿಳಿದಿದೆ. 

ಪ್ರತಿಯೊಬ್ಬ ಕನ್ನಡಿಗ ಇದರ ವಿರುದ್ಧ ಧ್ವನಿ ಎತ್ತಬೇಕು. ಇದು ರಾಜಕೀಯ ಹೊರಾಟವಲ್ಲ, ಕರ್ನಾಟಕವನ್ನು ಭ್ರಷ್ಟಾಚಾರದಿಂದ ಮುಕ್ತಗೊಳಿಸುವ ಹೋರಾಟ. ಹೀಗಾಗಿ ಕಾಂಗ್ರೆಸ್ ಪಕ್ಷದ ಎಲ್ಲ ನಾಯಕರು ಈ ಹೋರಾಟ ನಡೆಸಲು ನಿರ್ಧರಿಸಿದ್ದಾರೆ.’

*ವಿಧಾನಸಭೆ ವಿರೋಧ್ ಪಕ್ಷದ ನಾಯಕ ಸಿದ್ದರಾಮಯ್ಯ:*

‘ಇಂದು ಬಾಬಾ ಸಾಹೇಬ್ ಅಂಬೇಡ್ಕರ್ ಅವರ ಜನ್ಮದಿನವಾಗಿದ್ದು, ಅವರನ್ನು ಸ್ಮರಿಸುತ್ತಾ ಅವರಿಗೆ ನಮನ ಸಲ್ಲಿಸುವ ದಿನ. ಅವರು ದೇಶಕ್ಕೆ ಶ್ರೇಷ್ಠ ಸಂವಿಧಾನ ಕೊಟ್ಟಿದ್ದಾರೆ. ಕೇಂದ್ರ ಸರ್ಕಾರ, ರಾಜ್ಯ ಸರ್ಕಾರ ಹಾಗೂ ಸ್ಥಳೀಯ ಸಂಸ್ಥೆಗಳು ಸಂವಿಧಾನದ ಧ್ಯೇಯೋದ್ದೇಶದಂತೆ ಆಡಳಿತ ನಡೆಸಬೇಕು.

ಅಂಬೇಡ್ಕರ್ ಅವರ ಸ್ಫೂರ್ತಿ ಸದಾ ನಮ್ಮಲ್ಲಿ ಇರಲಿದೆ. ಪಕ್ಷದ ವತಿಯಿಂದ ಅವರಿಗೆ ಗೌರವ ಸಲ್ಲಿಸಲಾಗಿದ್ದು, ಮಹಾತ್ಮ ಗಾಂಧಿಜಿ ಅವರಿಗೂ ಗೌರವ ಸಲ್ಲಿಸಲಾಗಿದೆ. 

ಬಿಜೆಪಿ ಹಾಗೂ ಅದರ ಸರ್ಕಾರದ ಹಿರಿಯ ಸಚಿವ ಈಶ್ವರಪ್ಪನವರು ಸಂತೋಷ್ ಕೆ. ಪಾಟೀಲ್ ಸಾವಿಗೆ ಕಾರಣರಾಗಿದ್ದಾರೆ. ಈ ಬಗ್ಗೆ ಮೃತ ಸಂತೋಷ್ ಸ್ಪಷ್ಟವಾಗಿ ಈಶ್ವರಪ್ಪನವರೆ ನನ್ನ ಸಾವಿಗೆ ಎಂದಿದ್ದಾರೆ. ನಿನ್ನೆ ನಮ್ಮ ಪಕ್ಷದ ನಾಯಕರೆಲ್ಲರೂ ಬೆಳಗಾವಿಗೆ ಹೋಗಿ ಸಂತೋಷ್ ಕುಟುಂಬಕ್ಕೆ ಸಾಂತ್ವನ ಹೇಳಿ, ಧೈರ್ಯ ತುಂಬಿದ್ದೇವೆ. ನ್ಯಾಯ ಕೊಡಿಸಲು ಹೋರಾಟ ಮಾಡುವುದಾಗಿ ಮಾತು ಕೊಟ್ಟಿದ್ದೇವೆ. ನಾವು ಅಲ್ಲಿಗೆ ಹೋದಾಗ ಅವರ ತಾಯಿ, ಪತ್ನಿ ಬಹಳ ದುಃಖದಿಂದ ಅಳುತ್ತಾ ಸಂತೋಷ್ ಅವರ ಸಾವಿಗೆ ಈಶ್ವರಪ್ಪನವರೇ ನೇರ ಹೊಣೆ ಎಂದು ಹೇಳಿದರು. ಅವರ ದುಃಖ ನೋಡಲು ಸಾಧ್ಯವಾಗಲಿಲ್ಲ.

ಈಶ್ವರಪ್ಪ ಹಾಗೂ ಅವರ ಆಪ್ತರು 40% ಲಂಚ ಕೇಳಿದ್ದಕ್ಕೆ ನೋಂದು ಸಂತೋಷ್ ಅವರು ಆತ್ಮಹತ್ಯೆ ಮಾಡಿಕೊಂಡು ಅಕಾಲಿಕ ಮರಣಕ್ಕೆ ತುತ್ತಾಗಿದ್ದಾರೆ. 4 ಕೋಟಿ ಕಾಮಗಾರಿಗೆ 1.40 ಕೋಟಿ ಲಂಚ ಕೇಳಿದ್ದಾರೆ. ಇದನ್ನು ಸಂತೋಷ್ ತಾಯಿ ಹಾಗೂ ಪತ್ನಿ ಕೂಡ ಒಪ್ಪಿಕೊಂಡಿದ್ದಾರೆ. ಈ ಕೆಲಸ ಮಾಡಲು ಸಂತೋಷ್ ಖಾಸಗಿ ಅವರಿಂದ ಸಾಲ ಮಾಡಿ, ಪತ್ನಿಯ ಒಡವೆ ಅಡವಿಟ್ಟು ಕೆಲಸ ಮಾಡಿದ್ದಾರೆ. ಈ ಲಂಚವನ್ನು ಎಲ್ಲಿಂದ ತಂದುಕೊಡಲಿ ಎಂದು ಸೆತೋಷ್ ಪತ್ನಿಯ ಬಳಿ ಅಳಲು ತೋಡಿಕೊಂಡಿದ್ದಾರೆ. 

ಮಾಧ್ಯಮಗಳಲ್ಲಿ ಈಸ್ವರಪ್ಪ ಹಾಗೂ ಸಂತೋಷ್ ಇರುವ ಫೋಟೋಗಳು ಪ್ರಕಟವಾಗಿವೆ. ಆದರೂ ನನಗೆ ಸಂತೋಷ್ ಗೊತ್ತೇ ಇಲ್ಲ ಎಂದು ಈಶ್ವರಪ್ಪ ಹೇಳುತ್ತಿದ್ದಾರೆ. ಇನ್ನು ಅಲ್ಲಿನ ಗ್ರಾಮ ಪಂಚಾಯ್ತಿ ಅಧ್ಯಕ್ಷ ಲೋಕೇಶ್ ಅವರು ಹೇಳುವ ಪ್ರಕಾರ ಅವರು ಹಾಗೂ ಸಂತೋಷ್ ಒಟ್ಟಾಗಿ ಈಶ್ವರಪ್ಪನವರ ಮನೆಗೆ ಹೋಗಿದ್ದು, ಈಶ್ವರಪ್ಪನವರ ಭರವಸೆ ಮೇರೆಗೆ ಕೆಲಸ ನಡೆದಿದೆ ಎಂದು ಹೇಳಿದ್ದಾರೆ. ಈಶ್ವರಪ್ಪನವರೇ ವರ್ಕ್ ಆರ್ಡರ್ ನೀಡುವುದಾಗಿ ಹೇಳಿ ಭರವಸೆ ಕೊಟ್ಟಿದ್ದರು ಅದಕ್ಕೆ ನಾನೇ ಸಾಕ್ಷಿ. ನಾವು 2-3 ಬಾರಿ ಭೇಟಿ ಮಾಡಿದ್ದೆವು ಎಂದು ಹೇಳಿದ್ದಾರೆ. ಅಲ್ಲಿಗೆ ಈ ಪ್ರಕರಣದಲ್ಲಿ ಪ್ರತ್ಯಕ್ಷದರ್ಶಿ ಸಾಕ್ಷಿ ಇದ್ದು, ಕೆಲಸವೂ ಆಗಿದೆ. 

ಈಶ್ವರಪ್ಪ ಹೇಳದೇ ಯಾವುದೇ ಗುತ್ತಿಗೆದಾರ 4 ಕೋಟಿ ಕೆಲಸ ಮಾಡಲು ಸಾಧ್ಯವೇ? ಹೀಗಾಗಿ ಸಂತೋಷ್ ಗೆ ಮೂರುವರೆ ವರ್ಷದ ಹಿಂದೆ ಮದುವೆಯಾಗಿ ಒಂದು ಮಗುವಿದೆ. ಹೀಗಾಗಿ ಈ ಕುಟುಂಬಕ್ಕೆ ಸರ್ಕಾರ 1 ಕೋಟಿ ಪರಿಹಾರ ನೀಡಬೇಕು, ಸಂತೋಷ್ ಪತ್ನಿಗೆ ಸರ್ಕಾರಿ ಕೆಲಸ ನೀಡಬೇಕು. ಕೆಲಸ ನೀಡುವುದು ವಿಳಂಬವಾದರೆ ಸ್ಥಳೀಯ ನಾಯಕರುಗಳು ಯಾರಾದರೂ ತಕ್ಷಣವೇ ಕೆಲಸ ನೀಡಬೇಕು. ಹಾಗೂ ಮುಖ್ಯವಾಗಿ ಈ ಕಾಮಗಾರಿಯ ಬಿಲ್ ಪಾವತಿ ಮಾಡಬೇಕು.

ನಮ್ಮ ಪಕ್ಷದ ವತಿಯಿಂದ 11 ಲಕ್ಷ ಚೆಕ್ ನೀಡುವುದಾಗಿ ನಮ್ಮ ಅಧ್ಯಕ್ಷರು ಹೇಳಿದ್ದಾರೆ. ಇದು ಪಕ್ಷದ ವತಿಯಿಂದ ಆ ಕುಟುಂಬಕ್ಕೆ ಸಣ್ಣ ಸಹಾಯವಷ್ಟೇ. 

ಈ ಪ್ರಕರಣದ ದೂರಿನಲ್ಲಿ ಸಚಿವರು 40% ಲಂಚ ಆಗ್ರಹಿಸಿದ್ದಾರೆ, ಅದನ್ನು ಕೊಡದ ಹಿನ್ನೆಲೆಯಲ್ಲಿ ಬಿಲ್ ಪಾವತಿ ಮಾಡಿಲ್ಲ ಎಂದು ತಿಳಿಸಿದ್ದು, ಭ್ರಷ್ಟಾಚಾರದ ಪ್ರಸ್ತಾಪ ಸ್ಪಷ್ವಾಗಿದ್ದು, ಭ್ರಷ್ಟಾರ ನಿಗ್ರಹ ಪ್ರಕರಣ ದಾಖಲಾಗಬೇಕು ಎಂಬುದು ನಮ್ಮ ಆಗ್ರಹ. ಲಂಚ ಆಗ್ರಹಿಸಿದ ಈಶ್ವರಪ್ಪನವರ ಕಿರುಕುಳದಿಂದ ಆತ್ಮಹತ್ಯೆ ಆಗಿದ್ದು ಇದು ಕೊಲೆ ಪ್ರಕರಣವಾಗಿರುವ ಹಿನ್ನೆಲೆಯಲ್ಲಿ ಮುಖ್ಯಮಂತ್ರಿ ಬೊಮ್ಮಾಯಿ ಅವರು ಸಚಿವರನ್ನು ಬಂಧಿಸಬೇಕಾಗಿದೆ. ಅವರನ್ನು ಸಂಪುಟದಿಂದ ವಜಾಗೊಳಿಸಬೇಕಿದೆ. ಆದರೆ ಬಸವರಾಜ ಬೊಮ್ಮಾಯಿ ಅವರು ಸಚಿವರನ್ನು ರಕ್ಷಣೆ ಮಾಡುತ್ತಿದ್ದಾರೆ. ಬೊಮ್ಮಾಯಿ ಅವರ ಸರ್ಕಾರದ ಮೇಲೂ 40% ಲಂಚದ ಆರೋಪವಿದ್ದು, ಮುಖ್ಯಮಂತ್ರಿಗಳು ಇದರ ಭಾಗಿಯಾಗಿ ಸಚಿವರ ರಕ್ಷಣೆ ಮಾಡುತ್ತಿದ್ದಾರೆ.

ಈಶ್ವರಪ್ಪನವರಿಗೆ ಮಾನ ಮರ್ಯಾದೆ ಇದ್ದಿದ್ದರೆ ಪ್ರಕರಣದಲ್ಲಿ ಆರೋಪಿ 1 ಆಗಿರುವ ಹಿನ್ನೆಲೆಯಲ್ಲಿ ಪ್ರಕರಣ ದಾಖಲಾಗುತ್ತಿದ್ದಂತೆ ರಾಜೀನಾಮೆ ಕೊಡಬೇಕಿತ್ತು.

ಬಿಜೆಪಿಯವರು ಲಜ್ಜೆಗೆಟ್ಟವರು. ಇವರಿಂದ ಪ್ರಾಮಾಣಿಕ ತನಿಖೆ ಅಸಾಧ್ಯ. ಈಶ್ವರಪ್ಪ ಅಧಿಕಾರದಲ್ಲಿದ್ದರೆ ನ್ಯಾಯ ಸಿಗಲು ಸಾಧ್ಯವೇ? ಕೊಲೆ ಪ್ರಕರಣದಲ್ಲಿ ಭಾಗಿಯಾಗಿರುವಾಗ ಬೇರೆಯವರನ್ನು ಬಂಧಿಸುತ್ತಿರಲಿಲ್ಲವೇ? ಹೀಗಾಗಿ ಹೈಕೋರ್ಟ್ ಮೇಲುಸ್ತುವಾರಿಯಲ್ಲಿ ತನಿಖೆ ಆಗಬೇಕು.

ಹೀಗಾಗಿ ಮುಖ್ಯಮಂತ್ರಿಯನ್ನು ಘೆರಾವ್ ಮಾಡುವ ಕಾರ್ಯಕ್ರಮ ಹಮ್ಮಿಕೊಂಡಿದ್ದು, ನಾಳೆಯಿಂದ 7 ತಂಡಗಳು ಪ್ರತಿ ಜಿಲ್ಲೆಗೆ ಹೋಗಿ ಪ್ರತಿಭಟನೆ ಮಾಡಲಾಗುವುದು. ನಂತರ ಬ್ಲಾಕ್ ಮಟ್ಟದಲ್ಲಿ ಪ್ರತಿಭಟನೆ ನಡೆಸುತ್ತೇವೆ.

ಕರ್ನಾಟಕ ಇತಿಹಾಸದಲ್ಲಿ 40% ಕಮಿಷನ್ ತೆಗೆದುಕೊಂಡಂತಹ ಸರ್ಕಾರವನ್ನು ಕಂಡಿರಲಿಲ್ಲ. ರಾಜ್ಯದಲ್ಲಿ ಭ್ರಷ್ಟಾಚಾರ ಇರಲಿಲ್ಲ ಎಂದು ನಾನು ಹೇಳುವುದಿಲ್ಲ. ಆದರೆ 40% ಲಂಚ ಆರೋಪವಿದೆ. ಈ ಆರೋಪವನ್ನು ನಾನು ಮಾಡಿದರೆ ರಾಜಕೀಯ ಎಂದು ಹೇಳಬಹುದು. ಆದರೆ ಗುತ್ತಿಗೆದಾರರ ಸಂಘದ ಅಧ್ಯಕ್ಷರೇ ಈ ಆರೋಪ ಮಾಡಿದ್ದಾರೆ. ಮೃತ ಸಂತೋಷ್ ಕೂಡ ಅದಕ್ಕಾಗಿ ಆತ್ಮಹತ್ಯೆ ಮಾಡಿಕೊಂಡಿರುವುದಾಗಿ ಹೇಳಿದ್ದಾರೆ. ಈ ಬಗ್ಗೆ ಪ್ರಧಾನಿಗಳಿಗೆ ಪತ್ರ ಬರೆಯಲಾಗಿತ್ತು. ಆದರೂ ಯಾವುದೇ ಕ್ರಮ ಕೈಗೊಂಡಿಲ್ಲ, ಸಂತೋಷ್ ಕೇಂದ್ರದ ಗ್ರಾಮೀಣಾಭಿವೃದ್ಧಿ ಸಚಿವರಿಗೆ ಈ ಬಗ್ಗೆ ಪತ್ರ ಬರೆದಿದ್ದಾರೆ. ಹೀಗಾಗಿ ಪ್ರಕರಣದಲ್ಲಿ ಈಶ್ವರಪ್ಪನವರ ವಿರುದ್ಧ ಸಾಕಷ್ಟು ಸಾಕ್ಷ್ಯಾಧಾರಗಳು ಇವೆ.’

ಪ್ರಾಥಮಿಕ ತನಿಖಾ ವರದಿ ಬರುವವರೆಗೂ ರಾಜೀನಾಮೆ ಪಡೆಯುವುದಿಲ್ಲ ಎಂಬ ಬೊಮ್ಮಾಯಿ ಅವರ ಹೇಳಿಕೆ ಕುರಿತು ಕೇಳಿದ ಪ್ರಶ್ನೆಗೆ ಉತ್ತರಿಸಿದ ಅವರು, ‘ಪ್ರಾಥಮಿಕ ವರದಿ ಬರಲೇಬೇಕಾದ ಅಗತ್ಯವಿಲ್ಲ. ಎಫ್ಐಆರ್ ದಾಖಲಾಗಿದೆ. ತನಿಖೆ ಆರಂಭವಾಗಿದ್ದು, ಈಶ್ವರಪ್ಪ ಮೊದಲ ಆರೋಪಿಯಾಗಿದ್ದಾರೆ. ಇನ್ನು ಮೃತ ಸಂತೋಷ್, ಆತನ ಪತ್ನಿ ಅವರ ಹೇಳಿಕೆ ಇದೆ. ಈ ವಿಚಾರದಲ್ಲಿ ಸಚಿವರ ರಕ್ಷಣೆ ಮಾಡಬೇಡಿ, ರಾಜ್ಯವನ್ನು ಭ್ರಷ್ಟಾಚಾರ ರಾಜ್ಯವನ್ನಾಗಿ ಮಾಡಬೇಡಿ ಎಂದು ಆಗ್ರಹಿಸಿ ಇಂದು ಘೆರಾವ್ ಮಾಡಲಾಗುತ್ತಿದೆ’ ಎಂದು ಉತ್ತರಿಸಿದರು.
[14/04, 1:50 PM] +91 90088 29855: ಗುತ್ತಿಗೆದಾರ ಸಂತೋಷ್ ಪಾಟೀಲ್ ಅವರ ಆತ್ಮಹತ್ಯೆಗೆ ಕಾರಣರಾಗಿರುವ ಸಚಿವ ಈಶ್ವರಪ್ಪ ಅವರನ್ನು ಬಂಧಿಸುವಂತೆ ಒತ್ತಾಯಿಸಿ ಕೆಪಿಸಿಸಿ ಅಧ್ಯಕ್ಷ ಡಿ.ಕೆ. ಶಿವಕುಮಾರ್, ವಿಧಾನಸಭೆ ವಿರೋಧ ಪಕ್ಷದ ನಾಯಕ ಸಿದ್ದರಾಮಯ್ಯ, ಪ್ರಚಾರ ಸಮಿತಿ ಅಧ್ಯಕ್ಷ ಎಂ.ಬಿ.ಪಾಟೀಲ್, ರಾಷ್ಟ್ರೀಯ ಯುವ ಕಾಂಗ್ರೆಸ್ ಅಧ್ಯಕ್ಷ ಬಿ.ವಿ. ಶ್ರೀನಿವಾಸ್ ಮತ್ತಿತರ ಕಾಂಗ್ರೆಸ್ ಮುಖಂಡರು ವಿಧಾನಸೌಧದ ಎದಿರು ಗುರುವಾರ ಮಧ್ಯಾಹ್ನ ಪ್ರತಿಭಟನೆ ನಡೆಸಿದರು. ಕೆಪಿಸಿಸಿ ಕಾರ್ಯಾಧ್ಯಕ್ಷ  ರಾಮಲಿಂಗಾ ರೆಡ್ಡಿ, ಸಲೀಂ ಅಹ್ಮದ್, ಮಾಜಿ ಸಚಿವರಾದ ಟಿ ಬಿ ಜಯಚಂದ್ರ, ಪ್ರಿಯಾಂಕ್ ಖರ್ಗೆ, ಮಾಜಿ ಸಂಸದ ವಿ ಎಸ್ ಉಗ್ರಪ್ಪ, ಪ್ರದೇಶ ಮಹಿಳಾ ಕಾಂಗ್ರೆಸ್ ಅಧ್ಯಕ್ಷೆ ಪುಷ್ಪಾ ಅಮರನಾಥ್ ಮತ್ತಿತರರು ಪಾಲ್ಗೊಂಡರು.

Post a Comment

Previous Post Next Post