CM, ಇಂದು,,... ಎಲ್ಲೆಲ್ಲಿ ಏನು ಮಾಡಿದ್ರೂ, ವಿವರ ಇಲ್ಲಿದೆ...

[02/05, 11:41 AM] Gurulingswami. Holimatha. Vv. Cm: ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರು ಇಂದು ಬೆಂಗಳೂರಿನ ವಿಧಾನಸೌಧದ ಬ್ಯಾಂಕ್ವೆಟ್ ಹಾಲ್ ನಲ್ಲಿ  ಸಮಾಜ ಕಲ್ಯಾಣ ಇಲಾಖೆ ಹಾಗೂ ಪರಿಶಿಷ್ಟ ವರ್ಗಗಳ ಕಲ್ಯಾಣ ಇಲಾಖೆಯ ಕಲ್ಯಾಣ ಮಿತ್ರ ಏಕೀಕೃತ ಎಸ್ ಸಿ ಎಸ್ ಟಿ 24x7  ಸಹಾಯವಾಣಿ (9482300400) ಯನ್ನು ಲೋಕಾರ್ಪಣೆ ಮಾಡಿದರು. ಈ ಸಂದರ್ಭದಲ್ಲಿ ಸಭಾಪತಿ ಬಸವರಾಜ ಹೊರಟ್ಟಿ,
ಸಮಾಜ ಕಲ್ಯಾಣ ಸಚಿವ ಕೋಟ ಶ್ರೀನಿವಾಸ ಪೂಜಾರಿ, ಶಾಸಕರಾದ ಎನ್ ರವಿಕುಮಾರ್, ಎ. ನಾರಾಯಣಸ್ವಾಮಿ, ಅ.ದೇವೇಗೌಡ, ಅಂಬೇಡ್ಕರ್ ಅಭಿವೃದ್ಧಿ ನಿಗಮದ ಅಧ್ಯಕ್ಷ ಎಚ್ ನಾಗೇಶ, ರಾಮಣ್ಣ ಲಮಾಣಿ, ಮುಖ್ಯಮಂತ್ರಿಗಳ ಪ್ರಧಾನ ಕಾರ್ಯದರ್ಶಿ ಮಂಜುನಾಥ ಪ್ರಸಾದ, ಇಂಧನ‌ ಇಲಾಖೆ ಎಸಿಎಸ್ ಜಿ. ಕುಮಾರ ನಾಯಕ, ಸಮಾಜ ಕಲ್ಯಾಣ ಇಲಾಖೆ ಆಯುಕ್ತ ಡಾ. ಕೆ. ರಾಕೇಶಕುಮಾರ, ನಿವೃತ್ತ ಐಎಎಸ್ ಅಧಿಕಾರಿ ಕೆ. ಶಿವರಾಮ ಮತ್ತು ಇತರರು ಉಪಸ್ಥಿತರಿದ್ದರು.
[02/05, 12:18 PM] Gurulingswami. Holimatha. Vv. Cm: ಬೆಂಗಳೂರು, ಮೇ 02: ಇಂದು *ಸಮಾಜ ಕಲ್ಯಾಣ ಇಲಾಖೆ*  ವಿಧಾನ ಸೌಧದ ಬ್ಯಾಂಕ್ವೆಟ್ ಹಾಲ್ ನಲ್ಲಿ ಹಮ್ಮಿಕೊಂಡಿದ್ದ *ಕಲ್ಯಾಣ* *ಮಿತ್ರ ಸಹಾಯ* *ವಾಣಿ* ಹಾಗೂ ಇಲಾಖೆಯ ಅಧಿಕಾರಿಗಳಿಗೆ *ವೃತ್ತಿ* *ಸಾಮರ್ಥ್ಯ* ಅಭಿವೃದ್ಧಿ *ಕಾರ್ಯಾಗಾರವನ್ನು* ಉದ್ಘಾಟಿಸಿ ಮಾತನಾಡಿದರು.
[02/05, 12:18 PM] Gurulingswami. Holimatha. Vv. Cm: ಬೆಂಗಳೂರು, ಮೇ 02: ಇಂದು *ಸಮಾಜ ಕಲ್ಯಾಣ ಇಲಾಖೆ*  ವಿಧಾನ ಸೌಧದ ಬ್ಯಾಂಕ್ವೆಟ್ ಹಾಲ್ ನಲ್ಲಿ ಹಮ್ಮಿಕೊಂಡಿದ್ದ *ಕಲ್ಯಾಣ* *ಮಿತ್ರ ಸಹಾಯ* *ವಾಣಿ* ಹಾಗೂ ಇಲಾಖೆಯ ಅಧಿಕಾರಿಗಳಿಗೆ *ವೃತ್ತಿ* *ಸಾಮರ್ಥ್ಯ* ಅಭಿವೃದ್ಧಿ *ಕಾರ್ಯಾಗಾರವನ್ನು* ಉದ್ಘಾಟಿಸಿ ನಂತರ *ಮಾಧ್ಯಮದವರೊಂದಿಗೆ* ಮಾತನಾಡಿದರು
[02/05, 2:02 PM] Gurulingswami. Holimatha. Vv. Cm: *ಫಲಾನುಭವಿಗಳಿಗೆ ಅನುದಾನವನ್ನು  ನೇರವಾಗಿ ತಲುಪಿಸಲು ಗುರಿ ನಿಗದಿ : ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ*

ಬೆಂಗಳೂರು, ಮೇ 02 :
ಜನ ಕಲ್ಯಾಣಕ್ಕಾಗಿ ವಿವಿಧ
ನಿಗಮಗಳಿಗೆ ನೀಡಲಾಗಿರುವ ಅನುದಾನ ನೇರವಾಗಿ ಫಲಾನುಭವಿಗಳಿಗೆ ಮುಟ್ಟಬೇಕೆನ್ನುವ ಗುರಿಯನ್ನು ಅಧಿಕಾರಿಗಳಿಗೆ ನೀಡಲಾಗಿದ್ದು, ಇದನ್ನು ನಾನೇ ಸ್ವತ: ಮೇಲ್ವಿಚಾರಣೆ ಮಾಡುತ್ತೇನೆ ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ತಿಳಿಸಿದರು.

ಅವರು ಇಂದು ಸಮಾಜಕಲ್ಯಾಣ ಇಲಾಖೆ ವತಿಯಿಂದ ಕಲ್ಯಾಣ ಮಿತ್ರ ಸಹಾಯವಾಣಿ ಹಾಗೂ ಇಲಾಖೆಯ ಅಧಿಕಾರಿಗಳಿಗೆ ವೃತ್ತಿ ಸಾಮರ್ಥ್ಯ ಅಭಿವೃದ್ಧಿ ಕಾರ್ಯಾಗಾರವನ್ನು ಉದ್ಘಾಟಿಸಿ ಮಾತನಾಡಿದರು.

ಬದಲಾವಣೆಯ ಕಾಲ ಪ್ರಾರಂಭವಾಗಿದ್ದು, ಸಬೂಬುಗಳ ಕಾಲ ಮುಗಿದಿದೆ. ಶಿಕ್ಷಣ, ಆದಾಯ ಹೆಚ್ಚಳ, ಸ್ವಾಭಿಮಾನಿ ಬದುಕಿಗೆ ಬೇಕಾಗುವ ಎಲ್ಲ ವ್ಯವಸ್ಥೆಗಳನ್ನು ಸರ್ಕಾರ ಮಾಡುತ್ತಿದೆ. ಸಮಾಜ ಕಲ್ಯಾಣ ಇಲಾಖೆ ಪಾದರಸದಂತೆ ಕೆಲಸ ಮಾಡಬೇಕು. ಕೇವಲ ಘೋಷಣೆಯಲ್ಲ, ಕ್ರಿಯೆಯಿಂದ ಈ ವರ್ಗದ ಅಭಿವೃದ್ಧಿ ಸಾಧ್ಯ ಇದು. ಫಲಾನುಭವಿಗಳಿಗೆ ಮೀಸಲಿಟ್ಟಿರುವ ಹಣ ಅವರಿಗೆ ಯಾವುದೇ ತೊಡಕುಗಳಿಲ್ಲದೇ ತಲುಪಬೇಕು ಎಂದು ತಿಳಿಸಿದರು.

*ದುಡಿಮೆಯಿಂದ ಆರ್ಥಿಕತೆ ಹೆಚ್ಚುತ್ತದೆ :*
ಆರ್ಥಿಕತೆ ಎಂದರೆ ಜನರ ದುಡಿಮೆ. ದುಡಿಮೆ ಹೆಚ್ಚಿದಂತೆ ಆರ್ಥಿಕತೆ ಹೆಚ್ಚುತ್ತದೆ. ತಳಹಂತದ ಕಾರ್ಮಿಕರು ದೇಶದ ಆರ್ಥಿಕತೆಯನ್ನು ಬೆಳೆಸುತ್ತಿದ್ದಾರೆ. ಕಾರ್ಮಿಕರು, ರೈತರು, ಶ್ರಮಿಕರು  ಆರ್ಥಿಕತೆಯ ಪ್ರಮುಖ ಸ್ತಂಭಗಳಾಗಿದ್ದಾರೆ. ಅವರು ಜೀವನೋಪಾಯದ ಜೊತೆಗೆ ಆರ್ಥಿಕತೆಗೆ ದುಡಿಯುವಂತಾಗಬೇಕು.  ಎಸ್ ಸಿ ಎಸ್ ಟಿ, ಹಿಂದುಳಿದ ವರ್ಗಗಳು  ಅಭಿವೃದ್ಧಿಗೆ ಹಲವಾರು ಕಾರ್ಯಕ್ರಮಗಳನ್ನು ಮಾಡಲಾಗಿದೆ.100 ಹಾಸ್ಟೆಲ್ಗಳು, ರಾಜ್ಯದ ಶೈಕ್ಷಣಿಕ ಕೇಂದ್ರಗಳಲ್ಲಿ 1000 ಕೊಠಡಿಗಳ ವಿದ್ಯಾರ್ಥಿನಿಲಯಗಳ ಕ್ಲಸ್ಟರ್ ನಿರ್ಮಾಣ, ಉದ್ಯೋಗಸ್ಥ ಮಹಿಳೆಯರಿಗೆ ವಸತಿ ನಿಲಯಗಳನ್ನು ನಿರ್ಮಿಸಲಾಗುವುದು. ರಾಜ್ಯದ ಒಟ್ಟು ಸಾಕ್ಷರತೆ ಶೇ.75 ರಷ್ಟಿದ್ದು, ಅದರಲ್ಲಿ ಎಸ್ ಸಿ ಎಸ್ ಟಿ ಜನಾಂಗದವರು 65 % ಇದ್ದಾರೆ.  ಇದನ್ನು ಸುಧಾರಿಸಬೇಕು ಎಂದರು.

*ಎಸ್ ಸಿ ಎಸ್ ಟಿ ಜನರ ಅಭಿವೃದ್ಧಿಗೆ 5 ವರ್ಷದ  ಯೋಜನೆ :*

ಎಸ್ ಸಿ ಎಸ್ ಟಿ ಜನರ ಅಭಿವೃದ್ಧಿಗೆ 5 ವರ್ಷದ  ಯೋಜನೆ ರೂಪಿಸಬೇಕು. ಆರ್ಥಿಕ ನೆರವು ಒದಗಿಸಲು ಅ್ಯಂಕರ್ ಬ್ಯಾಂಕ್ ವ್ಯವಸ್ಥೆ ಮಾಡಲಾಗುತ್ತಿದೆ. ಎಸ್ ಸಿ ಎಸ್ ಪಿ –ಟಿಎಸ್ ಪಿ ಯೋಜನೆಗಳಿಗೆ 28 ಸಾವಿರ ನೀಡಲಾಗಿದೆ.. 75 ಯೂನಿಟ್ ವಿದಯುತ್ ಉಚಿತವಾಗಿ ನೀಡಲಾಗುವುದು. ಜಮೀನು ಖರೀದಿಗೆ 20 ಲಕ್ಷ ರೂ., ಎಸ್ ಸಿ ಎಸ್ ಟಿ ಯುವಕರಿಗೆ ಸ್ವಯಂ ಉದ್ಯೋಗದ ವ್ಯವಸ್ಥೆ, ಮನೆ ನಿರ್ಮಾಣಕ್ಕೆ 2 ಲಕ್ಷ ರೂ. ಈ ಎಲ್ಲ ಯೋಜನೆಗಳು ಜನರಿಗೆ ತಲುಪಿಸಲು ಅಧಿಕಾರಿಗಳ ಸಹಕಾರ ಅವಶ್ಯಕ. ಇಂದು ಉದ್ಘಾಟನೆಗೊಂಡಿರುವ ಸಹಾಯವಾಣಿ ಒಳ್ಳೆಯ ಕೆಲಸವಾಗಿದೆ, ದೂರದಿಂದ ಕರೆಮಾಡಿದವರಿಗೆ ಸಹಾಯ ಮಾಡುವ ಉತ್ತಮ ವ್ಯವಸ್ಥೆಯಾಗಬೇಕು. ಇಲಾಖೆಯ ಅಧಿಕಾರಿಗಳು ಬದಲಾವಣೆಯ ಹರಿಕಾರರಾಗಬೇಕು ಎಂದರು.
[02/05, 2:23 PM] Gurulingswami. Holimatha. Vv. Cm: **ದೀನದಲಿತರಿಗೆ ನೆರವು ಒದಗಿಸುವಲ್ಲಿ ಯಾವುದೇ ರಾಜಿ, ಮುಲಾಜಿಲ್ಲ: ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ* 

ಬೆಂಗಳೂರು: 
ದೀನದಲಿತರ ಶ್ರೇಯೋಭಿವೃದ್ಧಿ, ಸಮಾಜದ ಕಟ್ಟ ಕಡೆಯ ವ್ಯಕ್ತಿಯ ಕಣ್ಣೀರನ್ನು ಒರೆಸುವುದು ನನಗೆ ಮುಖ್ಯ. ಅವರು ಸ್ವಾಭಿಮಾನದ ಬದುಕು ನಡೆಸುವುದು ಬಹಳ ಮುಖ್ಯ. ಇದರಲ್ಲಿ ಯಾವುದೇ ರೀತಿಯ ರಾಜಿಯೂ ಇಲ್ಲ ಹಾಗೂ ಮುಲಾಜೂ ಇಲ್ಲ ಎಂದರು ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಹೇಳಿದರು.‌

ಅವರು ಇಂದು ಸಮಾಜ ಕಲ್ಯಾಣ ಇಲಾಖೆ  ವಿಧಾನ ಸೌಧದ ಬ್ಯಾಂಕ್ವೆಟ್ ಹಾಲ್ ನಲ್ಲಿ ಹಮ್ಮಿಕೊಂಡಿದ್ದ ಕಲ್ಯಾಣ ಮಿತ್ರ ಸಹಾಯ ವಾಣಿ ಹಾಗೂ ಇಲಾಖೆಯ ಅಧಿಕಾರಿಗಳಿಗೆ ವೃತ್ತಿ ಸಾಮರ್ಥ್ಯ ಅಭಿವೃದ್ಧಿ ಕಾರ್ಯಾಗಾರವನ್ನು ಉದ್ಘಾಟಿಸಿ ಮಾತನಾಡಿದರು.

ರಾಜ್ಯದಲ್ಲಿ ಕಾನೂನುಗಳಿವೆ, ಆ ಪ್ರಕಾರ ನಡೆದುಕೊಳ್ಳಲು ಏನು ತೊಂದರೆ? ನೀವು ಸರಿಯಾಗಿ ಕೆಲಸ ಮಾಡಿದರೆ ಇಡೀ ಕರ್ನಾಟಕದ ದೀನದಲಿತರು ಸಂತೋಷ ಪಡುತ್ತಾರೆ.  ಅವರ ಆಕಾಂಕ್ಷೆಗಳಿಗೆ ರೆಕ್ಕೆಪುಕ್ಕ ಬರುತ್ತವೆ.   ಆ ಸಂಕಲ್ಪವನ್ನು ತೊಡಬೇಕು. ನೀವು ಕೇವಲ ನಿಮ್ಮ ಕೆಲಸ ಮಾಡುವುದಷ್ಟೇ ಅಲ್ಲ, ಅಧಿಕಾರವನ್ನು ಜನರ ಪರವಾಗಿ ಬಳಕೆ ಮಾಡುವ ಕರ್ತವ್ಯ ನಿಮ್ಮದು ಎಂದು ಅಧಿಕಾರಿಗಳಿಗೆ ತಾಕೀತು ಮಾಡಿದರು.




*ಸರ್ಕಾರದ ಕಾರ್ಯಕ್ರಮಗಳನ್ನು ಜನತೆಗೆ ತಲುಪಿಸಲು ಸಾಮರ್ಥ್ಯ ಮತ್ತು ಬದ್ಧತೆ ಅಗತ್ಯ. ಜನ ಕಲ್ಯಾಣಕ್ಕಾಗಿ ಸರ್ಕಾರ ಜಾರಿಗೊಳಿಸುವ ಯೋಜನೆಗಳು ಸಮಾಜದ ಕಟ್ಟಕಡೆಯ ವ್ಯಕ್ತಿಗೆ ಮುಟ್ಟಬೇಕು ಹಾಗೂ ಅವನ ಜೀವನದ ಗುಣಮಟ್ಟವನ್ನು ಹೆಚ್ಚಿಸಬೇಕು ಎನ್ನುವ ಕಲ್ಪನೆ ಸಾಕಾರಗೊಳ್ಳಲು ಮೊದಲು ಇಲಾಖೆಗೆ ಸಾಮರ್ಥ್ಯ ಇರಬೇಕು. ಅದರ ಜೊತೆಗೆ ಬದ್ಧತೆ ಇರಬೇಕು ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ತಿಳಿಸಿದರು. 

ಆಡಳಿತದ ವ್ಯಾಖ್ಯಾನ ಬದಲಾಗಿದೆ. ಪ್ರಜಾಪ್ರಭುತ್ವದ ಆಕಾಂಕ್ಷೆಗಳು ಬದಲಾಗಿವೆ. ಬದಲಾವಣೆಯ ಈ ಪರ್ವ ಕಾಲದಲ್ಲಿ ನಾವೂ ಕೂಡ ಬದಲಾವಣೆಗೆ ಹೊಂದಿಕೊಂಡರೆ ಮಾತ್ರ ಪ್ರಸ್ತುತವಾಗುತ್ತೇವೆ. ಪ್ರಸ್ತುತವಾಗುವುದರ ಜೊತೆಗೆ ನಮ್ಮನ್ನು ನಂಬಿದ ಜನರಿಗೆ ನ್ಯಾಯವನ್ನು ಕೊಡಲು ಸಾಧ್ಯ. ಇದನ್ನು ನಾವು ಮಾಡದಿದ್ದರೆ, ಎಲ್ಲವೂ ಇದ್ದು ಇಲ್ಲದಂತಾಗುತ್ತದೆ. ಸರ್ಕಾರ ಪ್ರತಿ ವರ್ಷ ಅನುದಾನವನ್ನು ಕೊಡುತ್ತಿರುತ್ತದೆ. ಅದರ ಸದುಪಯೋಗವಾಗಬೇಕು. ಮತ್ತು ಸರಿಯಾದ ಸಮಯದಲ್ಲಿ ಆಗಬೇಕು. ಆಗ ಮಾತ್ರ ಕಾರ್ಯಕ್ರಮದ ಉದ್ದೇಶ ಈಡೇರುತ್ತದೆ. ವಿಶೇಷವಾಗಿ  ಎಂದರು.

ಕಷ್ಟದಲ್ಲಿರುವವರಿಗೆ, ಬಡವರಿಗೆ, ಅವಮಾನಕ್ಕೆ ಒಳಗಾದವರಿಗೆ, ತುಳಿತಕ್ಕೆ ಒಳಗಾದವರಿಗೆ ಕೈ ಹಿಡಿದು ಮೇಲೆತ್ತುವ ಸೌಭಾಗ್ಯ ಒದಗಿದೆ ಇದನ್ನು ನಾನು ಪ್ರಾಮಾಣಿಕವಾಗಿ ಮಾಡಬೇಕು ಎನ್ನುವ ಬದ್ಧತೆ ಬಂದರೆ ಈ ಸಮಾಜ ಖಂಡಿತ ಉದ್ಧಾರವಾಗುತ್ತದೆ. ನೀವು ನಿಮ್ಮ ಕರ್ತವ್ಯ, ಸರ್ಕಾರದ ಧ್ಯೇಯೋದ್ದೇಶಗಳು ಹಾಗೂ ಕಟ್ಟ ಕಡೆಯ ಮನುಷ್ಯನ ಕಣ್ಣೀರನ್ನು ಒರೆಸುವ ಕೆಲಸ ಮಾಡಬೇಕು.  ಟೀಕೆ ಟಿಪ್ಪಣಿಗಳು ಬಂದರೂ  ಕರ್ತವ್ಯದಿಂದ ವಿಮುಖರಾಗಬಾರದು ಕರ್ತವ್ಯದಲ್ಲಿ ತಲ್ಲೀನರಾದವರಿಗೆ ಯಾವುದೂ ಬಾಧಕವಾಗುವುದಿಲ್ಲ.  ಕರ್ತವ್ಯ ಮಾಡದೆ ಗತಿಸಿ ಹೋದ ಕಾಲ ಮರಳಿ ಬರುವುದಿಲ್ಲ ಅದರ ಬಗ್ಗೆ  ಮಾತನಾಡುವುದರಿಂದ ಪ್ರಯೋಜನವಿಲ್ಲ.  ಪ್ರಸ್ತುತವಾಗಿರುವ ನಮ್ಮ ಗುರಿ ಸಾಧನೆಯ ಛಲ ಮುಖ್ಯ.  ವರ್ತಮಾನದಲ್ಲಿ ಮಾಡುವ ಕೆಲಸ ಭವಿಷ್ಯ ನಿರ್ಮಿಸುತ್ತದೆ. ಸಮಯಕ್ಕೆ ತಕ್ಕ ಹಾಗೆ ಕಾರ್ಯಕ್ರಮಗಳನ್ನು ಮುಟ್ಟಿಸಬೇಕು.  ಸರಿಯಾದ ಮಾರ್ಗಸೂಚಿಗಳು ಇಲ್ಲದೆ ಕೆಲವು ಕಾರ್ಯಕ್ರಮಗಳು ಮುಟ್ಟುವುದಿಲ್ಲ ಎಂದರು. 

ಬಾಕ್ಸ್ 

*ವಿಳಂಬ ಧೋರಣೆ, ಅಸಡ್ಡೆ ಅಸಹಕಾರವನ್ನು ಎಂದೂ ಒಪ್ಪಲು ಸಾಧ್ಯವಿಲ್ಲ*
. ಅನುದಾನ ಒದಗಿಸಿದರೂ ಫಲಾನುಭವಿಗಳ ಆಯ್ಕೆ ಪ್ರಕ್ರಿಯೆಯಲ್ಲಿ ವಿಳಂಬವಾಗುತ್ತದೆ. ನಮ್ಮ ಸರ್ಕಾರ ವಿಳಂಬ ಧೋರಣೆ, ಅಸಡ್ಡೆ, ಅಸಹಕಾರವನ್ನು ಎಂದೂ ಒಪ್ಪಲು ಸಾಧ್ಯವಿಲ್ಲ ಎಂದರು.


 ದಾಖಲೆಗಳ ಸರಳೀಕರಣವಾಗಬೇಕು.  ಇಲಾಖೆಗಳ ಸಮನ್ವಯ. ನೌಕರರಲ್ಲಿ ತಾಳಮೇಳ ಇವೆಲ್ಲವುಗಳ ಅಮೂಲಾಗ್ರ ಬದಲಾವಣೆಯ ಅವಶ್ಯಕತೆ ಇದೆ. ಅತ್ಯಂತ ಸರಳವಾಗಿ ಕಾರ್ಯಕ್ರಮಗಳನ್ನು ರೂಪಿಸಿ ಅವುಗಳನ್ನು ಫಲಾನುಭವಿಗಳಿಗೆ ತಲುಪಿಸುವ ಕೆಲಸವನ್ನು ಮಾಡಬೇಕು ಎಂದರು.

ಸ್ವಾತಂತ್ರ್ಯ ಬಂದ ಮೇಲೆ 75 ವರ್ಷಗಳಾಗಿವೆ.  ಸರ್ಕಾರದ ಸಹಾಯವಿಲ್ಲದೆ ಅವರು ಏನೂ ಮಾಡಲು ಸಾಧ್ಯವಿಲ್ಲ.  ವ್ಯವಸ್ಥೆಯಲ್ಲಿ ಅವರಿಗೆ ನ್ಯಾಯ ಸಿಕ್ಕಿರುವುದಿಲ್ಲ. ಸರ್ಕಾರವೇ ನ್ಯಾಯ ಕೊಡಬೇಕು.  ನ್ಯಾಯ ಕೊಡುವುದಷ್ಟೇ ಅಲ್ಲ ಈ ಸಂದೇಶವನ್ನು ಕೊಡಬೇಕು. ನಮ್ಮ ಸರ್ಕಾರ ವಿಳಂಬ ಧೋರಣೆ, ಅಸಡ್ಡೆ ಅಸಹಕಾರವನ್ನು ಎಂದೂ ಒಪ್ಪಲು ಸಾಧ್ಯವಿಲ್ಲ ಎಂದರು. 




*ನೌಕರರಿಗೆ ರಕ್ಷಣೆ:*
ಈ ವ್ಯವಸ್ಥೆಯಲ್ಲಿ  ಸರ್ಕಾರಿ ನೌಕರರಾಗಿ ಕೆಲಸ ಮಾಡುವುದು ಸುಲಭವಲ್ಲ. ಬಹಳಷ್ಟು ಬಾರಿ ಕ್ಲಿಷ್ಟಕರ ಸಂದರ್ಭಗಳು ಬರುತ್ತವೆ.  ಸ್ಪಷ್ಟವಾದ ವಿಚಾರಗಳಿಲ್ಲದ ನಾಯಕತ್ವದಿಂದ ಈ ಸಂದರ್ಭಗಳು ಬರುತ್ತವೆ.   ಜವಾಬ್ದಾರಿಯಿಂದ ನುಣುಚಿಕೊಳ್ಳುವ ನಾಯಕತ್ವವಾಗಲಿ, ವ್ಯವಸ್ಥೆಯಾಗಲಿ ಉದ್ಧಾರ ಮಾಡಲು ಸಾಧ್ಯವಿಲ್ಲ. ಸಮಾಜ ಕಲ್ಯಾಣ ಇಲಾಖೆ ಕಾರ್ಯಕ್ರಮಗಳನ್ನು ಅನುಷ್ಠಾನ ಮಾಡಲು ಅನುಮಾನ, ಅವಕಾಶವಿಲ್ಲ. ಸ್ಪಷ್ಟ  ನಿರ್ದೇಶನಗಳನ್ನು ನೀಡಲಾಗುವುದು. ಅದರಂತೆ ಕೆಲಸ ಮಾಡಬೇಕು.  ನಿಮ್ಮನ್ನು ಸಂಪೂರ್ಣವಾಗಿ ಸಂರಕ್ಷಿಸುವುದು ನಮ್ಮ ಕೆಲಸ ಎಂದರು.
ಜನ ಹತಾಶರಾಗಬಾರದು. ಅವರು ಬಂದಾಗ ಸ್ವಲ್ಪ ಕೋಪದಲ್ಲಿ ಮಾತನಾಡುತ್ತಾರೆ.  ನಾವು ಸಮಸ್ಯೆಗಳನ್ನು ಚರ್ಚೆ ಮಾಡುತ್ತೇವೆ.  ಸಮುದಾಯಗಳು ಸಮಸ್ಯೆಗಳೊಂದಿಗೆ ಬದುಕುತ್ತಾರೆ. ಸಮಸ್ಯೆಯನ್ನು ಚರ್ಚೆ ಮಾಡುವುದಕ್ಕೂ ಶ್ರಮಪಟ್ಟು ಕೆಲಸ  ಮಾಡುವುದಕ್ಕೂ ಬಹಳ ವ್ಯತ್ಯಾಸವಿದೆ ಎಂದರು.  

*ಆಡಳಿತದಲ್ಲಿ ಆಮೂಲಾಗ್ರ ಬದಲಾವಣೆ*
ನಾವು ಅವರ ಮಟ್ಟಕ್ಕೆ ಹೋಗಿ ಅವರ ಸ್ಥಾನದಲ್ಲಿದ್ದುಕೊಂಡು ಯೋಚಿಸಿದಾಗ ನ್ಯಾಯ ನೀಡಲು ಸಾಧ್ಯವಾಗುತ್ತದೆ. ಅವರ ಮಾತನ್ನು ಕೇಳಿದಾಗ ನಿಮ್ಮ ಮನ:ಪರಿವರ್ತನೆಯಾಗಿ  ನೀವೇ ಸಮಸ್ಯೆಯನ್ನು ಬಗೆಹರಿಸುತ್ತೀರಿ. ಬಡವರ ಉದ್ಧಾರಕ್ಕೆ ಒಂದು ಸಕಾರಣವನ್ನು ಹುಡುಕಿದರೆ  ಸಾಕು.  ಅದಕ್ಕಾಗಿ ಆಡಳಿತದಲ್ಲಿ ನಿರ್ಣಯ ಮಾಡುವ ಹಂತಗಳಲ್ಲಿ ಆಮೂಲಾಗ್ರ ಬದಲಾವಣೆಗಳನ್ನು ತರಲಾಗುತ್ತದೆ. ಹಲವಾರು ಹಂತಗಳನ್ನು ತೆಗೆಯಲಾಗುತ್ತಿದೆ. ವಿಶೇಷವಾಗಿ ಸಮಾಜ ಕಲ್ಯಾಣ ಇಲಾಖೆಗೆ ಒಂದು ಆಯಾಮವನ್ನು ಕೊಡಬೇಕು. ಎಲ್ಲಾ ವಿಷಯಗಳು ತುರ್ತಾಗಿ ಆಗಬೇಕೆಂದು  ಆದೇಶಿಸಬೇಕೆಂದು ಸಚಿವರಿಗೆ ತಿಳಿಸಿದ್ದೇನೆ. ನಿಗದಿತ ಸಮಯದಲ್ಲಿ ಕಾರ್ಯಕ್ರಮಗಳು ತಲುಪಿದರೆ ಬದುಕಿನಲ್ಲಿ ಬದಲಾವಣೆ ತರಬಹುದು. ಈ ಇಲಾಖೆಯ ಕಾರ್ಯಕ್ರಮಗಳು ವೆಚ್ಚ ಅಲ್ಲ. ಮಾನವ ಸಂಪನ್ಮೂಲಗಳಲ್ಲಿ ಬಂಡವಾಳ ಹೂಡಿಕೆ ಎಂದು ತಿಳಿಸಿದ್ದೇನೆ ಎಂದರು.
[02/05, 3:34 PM] Gurulingswami. Holimatha. Vv. Cm: *ರಾಜ್ಯದ ಗಡಿ ವಿಚಾರ- ಸರ್ಕಾರದ ನಿಲುವು ಸ್ಪಷ್ಟ : ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ*

ಬೆಂಗಳೂರು, ಮೇ 02 :

 ರಾಜ್ಯದ ಗಡಿ ಬಗ್ಗೆ ಸರ್ಕಾರದ ನಿಲುವು ಬಹಳ ಸ್ಪಷ್ಟವಾಗಿದೆ. ರಾಜ್ಯದ ಗಡಿ ಪ್ರದೇಶದ ಒಂದಿಂಚೂ ಜಾಗವನ್ನು ಬಿಟ್ಟುಕೊಡುವ ಪ್ರಶ್ನೆಯೇ ಇಲ್ಲ ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ತಿಳಿಸಿದರು.

ಅವರು ಇಂದು ಸಮಾಜಕಲ್ಯಾಣ ಇಲಾಖೆಯ ಕಲ್ಯಾಣ ಮಿತ್ರ ಸಹಾಯವಾಣಿ ಹಾಗೂ ಇಲಾಖೆಯ ಅಧಿಕಾರಿಗಳಿಗೆ ವೃತ್ತಿ ಸಾಮರ್ಥ್ಯ ಅಭಿವೃದ್ಧಿ ಕಾರ್ಯಾಗಾರವನ್ನು ಉದ್ಘಾಟಿಸಿದ ನಂತರ ಮಾಧ್ಯಮದವರೊಂದಿಗೆ ಮಾತನಾಡಿದರು.

ಮಹಾರಾಷ್ಟ್ರದಲ್ಲಿನ ರಾಜಕಾರಣಿಗಳು ಇಕ್ಕಟ್ಟಿನಲ್ಲಿ ಸಿಲುಕಿದ್ದಾರೆ. ಅದಕ್ಕಾಗಿ ರಾಜ್ಯದ ಗಡಿ ಭಾಷೆಗಳ ಬಗ್ಗೆ ಕೆದಕುತ್ತಿದ್ದಾರೆ. ಮಹಾರಾಷ್ಟ್ರದಲ್ಲಿ ಹಲವಾರು ಕನ್ನಡ ಭಾಷೆ ಮಾತನಾಡುವ ಪ್ರದೇಶಗಳಿವೆ  . ಈ ಬಗ್ಗೆಯೂ ಕ್ರಮ ತೆಗೆದುಕೊಳ್ಳುವ ಚಿಂತನೆ ಸರ್ಕಾರ ಮಾಡುತ್ತಿದೆ. ಅವರ ರಾಜಕೀಯ ಉಳಿವಿಗಾಗಿ ರಾಜ್ಯದ ಗಡಿ ಭಾಷೆ ವಿಚಾರಗಳನ್ನು ಎತ್ತುವುದು ಸಣ್ಣತನ. ಈ ರೀತಿಯನ್ನು ಮಹಾರಾಷ್ಟ್ರದ ಎಲ್ಲಾ ರಾಜಕಾರಣಿಗಳು ಕೈಬಿಡುವಂತೆ ಮುಖ್ಯಮಂತ್ರಿಗಳು ಆಗ್ರಹಿಸಿದರು.

Post a Comment

Previous Post Next Post