ಮಂಗಳೂರಿನಲ್ಲಿ ಮತ್ತೊಂದು ಘಟನೆ: ವ್ಯಕ್ತಿಯ ಮೇಲೆ‌ ಮಾರಣಾಂತಿಕ ಹಲ್ಲೆ

ಮಂಗಳೂರು : ಬಿಜೆಪಿ ಮುಖಂಡ ಪ್ರವೀಣ್ ನೆಟ್ಟಾರು ಅವರ ಹತ್ಯೆ ಬೆನ್ನಲ್ಲೇ ಮತ್ತೊಂದುಕೊಲೆ ನಡೆದಿದೆ. ಸುರತ್ಕಲ್ ನಲ್ಲಿ ಇಂದು ಗುರುವಾರ ರಾತ್ರಿ ಯುವಕನೊಬ್ಬನ ಮೇಲೆ ಮಾರಕಾಯುಧಗಳಿಂದ ದಾಳಿ ಮಾಡಿ ಹತ್ಯೆ ಮಾಡಲಾಗಿದೆ ಎಂಬ ಮಾಹಿತಿ ಲಭ್ಯವಾಗಿದೆ
 ಮಂಗಳೂರಿನಲ್ಲಿ ಮತ್ತೊಂದು ಘಟನೆ: ವ್ಯಕ್ತಿಯ ಮೇಲೆ‌ ಮಾರಣಾಂತಿಕ ಹಲ್ಲೆ

ಮಂಗಳೂರು: ಪ್ರವೀಣ್ ನೆಟ್ಟಾರು ಹತ್ಯೆ ಪ್ರಕರಣ ಹಸಿರಾಗಿರುವಾಗಲೇ ನಗರದ ಸುರತ್ಕಲ್ ನಲ್ಲಿ ಗುರುವಾರ ಮತ್ತೊಂದು ಘಟನೆ ನಡೆದಿದೆ. 
ವ್ಯಕ್ತಿಯೊಬ್ಬರ ಮೇಲೆ ಮಾರಕಾಸ್ತ್ರಗಳಿಂದ  ದಾಳಿ ನಡೆಸಲಾಗಿದೆ.
ಫಾಜಿಲ್ ಮಂಗಲಪೇಟೆ ದಾಳಿಗೊಳಗಾದಾತ. ಈತ ಸುರತ್ಕಲ್ ನಲ್ಲಿ ಮೊಬೈಲ್ ಅಂಗಡಿ ಹೊಂದಿದ್ದು, ಗುರುವಾರ ರಾತ್ರಿ ವೇಳೆ ದಾಳಿನಡೆದಿದೆ. ಪೊಲೀಸರು ಸ್ಥಳಕ್ಕೆ ಧಾವಿಸಿದ್ದು ಪರಿಶೀಲನೆ ನಡೆಸುತ್ತಿದ್ದಾರೆ.

Post a Comment

Previous Post Next Post