ಜನೋತ್ಸವ ಕಾರ್ಯಕ್ರಮ ಭಾನುವಾರಕ್ಕೆ ಮುಂದೂಡಿಕೆ

ಬೆಂಗಳೂರು: ರಾಜ್ಯ ಸರ್ಕಾರದಿಂದ ದೊಡ್ಡಬಳ್ಳಾಪುರದಲ್ಲಿ ನಾಳೆಯ ಜನೋತ್ಸವ ಕಾರ್ಯಕ್ರಮವನ್ನು ( BJP Janotsava Program ) ಆಯೋಜಿಸಲಾಗಿತ್ತು. ನಿನ್ನೆ ರಾತ್ರಿ ಸಚಿವ ಉಮೇಶ್ ಕತ್ತಿ ( Minister Umesh Katti ) ನಿಧನರಾದ ಹಿನ್ನಲೆಯಲ್ಲಿ, ನಾಳೆ ನಡೆಯಬೇಕಿದ್ದಂತ ಜನೋತ್ಸವ ಕಾರ್ಯಕ್ರಮ ಭಾನುವಾರಕ್ಕೆ ಮುಂದೂಡಿಕೆ ಮಾಡಲಾಗಿದೆ.ಈ ಕುರಿತಂತೆ ಆರೋಗ್ಯ ಮತ್ತು ವೈದ್ಯಕೀಯ ಸಚಿವ ಡಾ.ಕೆ ಸುಧಾಕರ್ ( Minister Dr K Sudhakar ) ಮಾಹಿತಿ ನೀಡಿದ್ದು, ನಾಳೆ ಬಿಜೆಪಿ ಪಕ್ಷದಿಂದ ದೊಡ್ಡಬಳ್ಳಾಪುರದಲ್ಲಿ ಆಯೋಜಿಸಿದ್ದಂತ ಜನೋತ್ಸವ ಕಾರ್ಯಕ್ರಮವನ್ನು ಭಾನುವಾರಕ್ಕೆ ಮುಂದೂಡಿಕೆ ಮಾಡಲಾಗಿದೆ ಎಂಬುದಾಗಿ ತಿಳಿಸಿದ್ದಾರೆ.

BREAKING NEWS : ಸ್ವಗ್ರಾಮಕ್ಕೆ ಕತ್ತಿ ಪಾರ್ಥೀವ ಶರೀರ ಏರ್ ಲಿಫ್ಟ್ : ಬೆಲ್ಲದ ಬಾಗೇವಾಡಿಯಲ್ಲಿ ಅಂತಿಮ ಸಂಸ್ಕಾರ

ಅಂದಹಾಗೇ ಹೃದಯಾಘಾತದಿಂದ ಸಚಿವ ಉಮೇಶ್ ಕತ್ತಿಯವರು ನಿನ್ನೆ ನಿಧನರಾಗಿದ್ದರು. ಅವರ ಅಂತ್ಯಕ್ರಿಯೆಯನ್ನು ಇಂದು ಸ್ವಗ್ರಾಮದಲ್ಲಿ ನೆರವೇರಿಸಲಾಗುತ್ತಿದೆ. ಅವರ ನಿಧನದ ಹಿನ್ನಲೆಯಲ್ಲಿ ರಾಜ್ಯ ಸರ್ಕಾರದಿಂದ ಮೂರು ದಿನಗಳ ಕಾಲ ರಾಜ್ಯಾಧ್ಯಂತ ಶೋಕಾಚರಣೆ ಘೋಷಣೆ ಮಾಡಲಾಗಿದೆ. ಈ ಹಿನ್ನಲೆಯಲ್ಲಿಯೇ ನಾಳೆ ದೊಡ್ಡಬಳ್ಳಾಪುರದಲ್ಲಿ ನಡೆಯಬೇಕಿದ್ದಂತ ಬಿಜೆಪಿಯ ಜನೋತ್ಸವ ಕಾರ್ಯಕ್ರಮವನ್ನು ಭಾನುವಾರಕ್ಕೆ ಮುಂದೂಡಿಕೆ ಮಾಡಲಾಗಿದೆ.

BIGG NEWS: ಸಚಿವ ಉಮೇಶ್‌ ಕತ್ತಿ ನಿಧನಕ್ಕೆ ರಮೇಶ ಜಾರಕಿಹೊಳಿ ಕಂಬನಿ7-9-2022
ಗೆ, 
ಸಂಪಾದಕರು / ವರದಿಗಾರರು.

ಪ್ರಕಟಣೆಯ ಕೃಪೆಗಾಗಿ
ದೊಡ್ಡಬಳ್ಳಾಪುರದ ‘ಜನೋತ್ಸವ’ ಸೆ.11ಕ್ಕೆ ಮುಂದೂಡಿಕೆ
ಬೆಂಗಳೂರು: ರಾಜ್ಯದ ಸಚಿವ ಉಮೇಶ್ ಕತ್ತಿ ಅವರ ಅಕಾಲಿಕ ನಿಧನದ ಕಾರಣ, ದೊಡ್ಡಬಳ್ಳಾಪುರದಲ್ಲಿ ಸೆಪ್ಟೆಂಬರ್ 8ರಂದು ನಡೆಸಲುದ್ದೇಶಿಸಿದ್ದ ‘ಜನೋತ್ಸವ’ವನ್ನು ಸೆಪ್ಟೆಂಬರ್ 11ಕ್ಕೆ ಮುಂದೂಡಲಾಗಿದೆ ಎಂದು ಪಕ್ಷದ ರಾಜ್ಯ ಉಪಾಧ್ಯಕ್ಷ ನಿರ್ಮಲ್ ಕುಮಾರ್ ಸುರಾಣಾ ಅವರು ತಿಳಿಸಿದ್ದಾರೆ. 


(ಕರುಣಾಕರ ಖಾಸಲೆ)
ಮಾಧ್ಯಮ ಸಂಚಾಲಕರು
  ಬಿಜೆಪಿ ಕರ್ನಾಟಕ

Post a Comment

Previous Post Next Post