03-09-2022
ಬೆಂಗಳೂರು: ದಾವಣಗೆರೆ ನಗರದಲ್ಲಿ ಮೂರು ದಿನಗಳ ಕಾಲ ನಡೆಯುವ ಭಾರತೀಯ ಜನತಾ ಪಾರ್ಟಿಯ ರಾಜ್ಯ ಎಸ್.ಟಿ. ಮೋರ್ಚಾ ಪ್ರಶಿಕ್ಷಣ ವರ್ಗ ಸಮಾಲೋಚನಾ ಸಭೆಗೆ ಇಂದು ಚಾಲನೆ ಕೊಡಲಾಯಿತು.
ನಗರಾಭಿವೃದ್ಧಿ ಹಾಗೂ ದಾವಣಗೆರೆ ಜಿಲ್ಲಾ ಉಸ್ತುವಾರಿ ಸಚಿವರಾದ ಬಿ.ಎ.ಬಸವರಾಜ(ಬೈರತಿ) ಅವರು ದೀಪ ಬೆಳಗಿಸಿ ಚಾಲನೆ ಕೊಟ್ಟರು. ಭಾರತೀಯ ಜನತಾ ಪಾರ್ಟಿಯ ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿ ಸಿ.ಟಿ.ರವಿ, ರಾಜ್ಯ ಪ್ರಧಾನ ಕಾರ್ಯದರ್ಶಿ ಮಹೇಶ್ ಟೆಂಗಿನಕಾಯಿ, ದಾವಣಗೆರೆ ಸಂಸದ ಜಿ.ಎಂ.ಸಿದ್ದೇಶ್ವರ, ಜಗಳೂರು ಶಾಸಕರಾದ ಎಸ್.ವಿ.ರಾಮಚಂದ್ರ, ರಾಜ್ಯ ಬಿಜೆಪಿ ಎಸ್. ಟಿ ಮೋರ್ಚಾ ಅಧ್ಯಕ್ಷ ತಿಪ್ಪರಾಜು ಹವಾಲ್ದಾರ್ ಅವರೊಂದಿಗೆ ದೀಪ ಬೆಳಗಿಸುವ ಮೂಲಕ ಸಮಾಲೋಚನಾ ಸಭೆಗೆ ಚಾಲನೆ ನೀಡಿದರು.
ದಾವಣಗೆರೆ ಬಿಜೆಪಿ ಜಿಲಾ ಅ್ಲಧ್ಯಕ್ಷ ಎಸ್.ಎಂ.ವೀರೇಶ್ ಸೇರಿದಂತೆ ಎಸ್.ಟಿ ಮೋರ್ಚಾ ಪದಾಧಿಕಾರಿಗಳು ಭಾಗವಹಿಸಿದ್ದರು.
(ಕರುಣಾಕರ ಖಾಸಲೆ)
ಮಾಧ್ಯಮ ಸಂಚಾಲಕರು
ಬಿಜೆಪಿ ಕರ್ನಾಟಕ
Post a Comment