KPCC ಪ್ರತಿಭಟನೆ,ದೆಹಲಿಯಲ್ಲಿ ಡಿ.ಕೆ. ಶಿವಕುಮಾರ್

[04/09, 2:45 PM] Kpcc official: ಇಂದು  ಮಹಿಳಾ ಕಾಂಗ್ರೆಸ್ ವತಿಯಿಂದ ಕೇಂದ್ರ ಸರ್ಕಾರ ನಿರಂತರವಾಗಿ ಅಗತ್ಯ ವಸ್ತುಗಳ ಬೆಲೆ ಏರಿಕೆ  ವಿರುದ್ಧ ಹಾಗೂ ಶಾಸಕ ಅರವಿಂದ ಲಿಂಬಾವಳಿ  ಮಹಿಳೆ ಮೇಲಿನ ದೌರ್ಜನ್ಯ ಖಂಡಿಸಿ  ಪ್ರತಿಭಟನೆಯನ್ನು ರೇಸ್ ಕೋರ್ಸ್ ರಸ್ತೆಯ ಕಾಂಗ್ರೆಸ್ ಭವನದಲ್ಲಿ ಹಮ್ಮಿಕೊಳ್ಳಲಾಯಿತು.

ಈ ಪ್ರತಿಭಟನೆಯಲ್ಲಿ ರಾಜ್ಯ ಮಹಿಳಾ ಕಾಂಗ್ರೆಸ್ ಅಧ್ಯಕ್ಷರಾದ ಶ್ರೀಮತಿ ಪುಷ್ಪಾ ಅಮರನಾಥ್ ಸೇರಿದಂತೆ ಮಹಿಳಾ ಕಾಂಗ್ರೆಸ್ ಪದಾಧಿಕಾರಿಗಳು ಭಾಗವಹಿಸಿದ್ದರು..
[04/09, 4:11 PM] Kpcc official: ದಿಲ್ಲಿಯಲ್ಲಿ ಕಾಂಗ್ರೆಸ್ ರಾಲಿ ಸಂದರ್ಭ ಕೆಪಿಸಿಸಿ ಅಧ್ಯಕ್ಷ ಡಿ ಕೆ ಶಿವಕುಮಾರ್ ಅವರು ಭಾನುವಾರ ಮಾತನಾಡಿದ್ದು...
[04/09, 5:57 PM] Kpcc official: *ದೆಹಲಿಯಲ್ಲಿ ಪ್ರತಿಭಟನೆ ಸಂದರ್ಭ ಡಿ.ಕೆ. ಶಿವಕುಮಾರ್ ಅವರ ಮಾತುಗಳು:*

ಬಿಜೆಪಿ ಸರಕಾರ ದಿನನಿತ್ಯ ಜನಸಾಮಾನ್ಯರ ಜೇಬು ಪಿಕ್ ಪಾಕೆಟ್ ಮಾಡುತ್ತಿದೆ. ಬೆಲೆ ಏರಿಕೆಯಿಂದ ದೇಶವನ್ನು ರಕ್ಷಿಸಲು ನಾವೆಲ್ಲರೂ ಇಂದು ಹೋರಾಟ ಮಾಡುತ್ತಿದ್ದೇವೆ.

ಯುವಕರು, ಮಹಿಳೆಯರು ಸೇರಿದಂತೆ ಸಮಾಜದ ಪ್ರತಿಯೊಬ್ಬ ಪ್ರಜೆಯನ್ನು ಸುಲಿಗೆ ಮಾಡಲಾಗುತ್ತಿದೆ. ಅಗತ್ಯ ವಸ್ತುಗಳ ಬೆಲೆ ಗಗನಕ್ಕೆ ಏರುತ್ತಿದ್ದು, ಜನರ ಆದಾಯ ಪಾತಾಳಕ್ಕೆ ಕುಸಿಯುತ್ತಿದೆ. ಇದರ ವಿರುದ್ಧ ಭಾರತ ರಾಷ್ಟ್ರೀಯ ಕಾಂಗ್ರೆಸ್ ದೆಹಲಿ ಚಲೋ ಪ್ರತಿಭಟನೆ ಮಾಡುತ್ತಿದೆ.

ಜನ ಸಾಮಾನ್ಯರ ಬದುಕು ಹಸನಾಗಬೇಕು, ಬೆಲೆ ಏರಿಕೆಯಿಂದ ಆಗುತ್ತಿರುವ ತೊಂದರೆಯಿಂದ ಎಲ್ಲಾ ವರ್ಗದ ಜನರನ್ನು ರಕ್ಷಿಸಬೇಕು ಎಂದು ನಾವು ಪ್ರತಿಭಟಿಸುತ್ತಿದ್ದೇವೆ. ಎಲ್ಲರೂ ಈ ಪ್ರತಿಭಟನೆಗೆ ಬೆಂಬಲಿಸಿ.

Post a Comment

Previous Post Next Post