[25/12, 7:25 PM] Cm Ps: *ಕೊರೊನಾ ವೈರಸ್ ಬಗ್ಗೆ ಬೇಡ; ಮುಂಜಾಗ್ರತೆ ಅಗತ್ಯ- ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ*
ಬೆಂಗಳೂರು, ಡಿಸೆಂಬರ್ 25- ಕೊರೊನಾದ ಬಗ್ಗೆ ಗಾಬರಿಯಾಗಬೇಕಾಗಿಲ್ಲ. ಆದರೆ ಮುಂಜಾಗ್ರತೆ ವಹಿಸುವುದು ಅಗತ್ಯವಾಗಿದೆ ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರು ಇಂದು ಇಲ್ಲಿ ತಿಳಿಸಿದರು.
ಅವರು ಇಂದು ಬೆಂಗಳೂರಿನಲ್ಲಿ ಮಾಧ್ಯಮದವರೊಂದಿಗೆ ಮಾತನಾಡುತ್ತ ಕೊರೊನಾ ಬಗ್ಗೆ ಆರೋಗ್ಯ ಸಚಿವರು ಮತ್ತು ವಿಪತ್ತು ನಿರ್ವಹಣಾ ಸಚಿವರ ಚರ್ಚಿಸಲಿದ್ದಾರೆ. ಕೇಂದ್ರದಿಂದ ಕೆಲವು ಮಾರ್ಗಸೂಚಿಗಳು ಬಂದಿದ್ದು, ರಾಜ್ಯ ಸರ್ಕಾರದಿಂದಲೂ ಕೆಲವು ನಿರ್ಣಯಗಳನ್ನು ತೆಗೆದುಕೊಳ್ಳಲಾಗುವುದು. ಈ ಕುರಿತು ನಾಳೆ ಮಾರ್ಗಸೂಚಿ ಹೊರಡಿಸಲಾಗುವುದು ಎಂದು ತಿಳಿಸಿದರು.
ಈ ಹಿಂದೆ ಅಂತರರಾಷ್ಟ್ರೀಯ ಮಟ್ಟದಲ್ಲಿ ಆದ ಬೆಳವಣಿಗೆಗಳ ಪರಿಣಾಮ ದೇಶ ಹಾಗೂ ರಾಜ್ಯದ ಮೇಲೂ ಆಗಿವೆ. ಈ ಹಿನ್ನೆಲೆಯಲ್ಲಿ ನಾಳೆಯ ಸಭೆಯಲ್ಲಿ ತಜ್ಞರೊಂದಿಗೆ ಚರ್ಚಿಸಿ ತೀರ್ಮಾನ ಕೈಗೊಳ್ಳಲಾಗುವುದು ಎಂದು ಮುಖ್ಯಮಂತ್ರಿಗಳು ತಿಳಿಸಿದರು.
[25/12, 8:45 PM] Cm Ps: *ರಾಜ್ಯದಲ್ಲಿ 8 ಲಕ್ಷ ಕೋಟಿ ಗೂ ಹೆಚ್ಚು ಹೂಡಿಕೆಯ ನಿರೀಕ್ಷೆ: ಇದರ ಲಾಭ ಪಡೆಯಲು ಯುವಕರಿಗೆ ಮುಖ್ಯಮಂತ್ರಿ ಕರೆ*
ಬೆಂಗಳೂರು, ಡಿಸೆಂಬರ್ 25-
ಬೆಂಗಳೂರಿನಲ್ಲಿ ಇತ್ತೀಚೆಗೆ ನಡೆದ ಜಾಗತಿಕ ಹೂಡಿಕೆದಾರರ ಸಮಾವೇಶದ ಹಿನ್ನೆಲೆಯಲ್ಲಿ 8 ಲಕ್ಷ ಕೋಟಿ ರೂ. ಗಳ ಹೂಡಿಕೆಯ ನಿರೀಕ್ಷೆಯಲ್ಲಿದ್ದೇವೆ. ಈ ಹೂಡಿಕೆಯ ಲಾಭ ಪಡೆಯಲು ಯುವಕರು ಕೌಶಲ್ಯಾಭಿವೃದ್ಧಿಗೆ ಒತ್ತು ನೀಡಬೇಕೆಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರು ತಿಳಿಸಿದರು.
ಅವರು ಇಂದು ಶ್ರೀ ಕಂಠೀರವ ಒಳಾಂಗಣ ಕ್ರೀಡಾಂಗಣದಲ್ಲಿ ಉನ್ನತ ಶಿಕ್ಷಣ, ಕೌಶಲ್ಯಾಭಿವೃದ್ಧಿ ಮತ್ತು ಜೀವನೋಪಾಯ ಇಲಾಖೆ ಮತ್ತು ಐಟಿ, ಬಿಟಿ ಹಾಗೂ ವಿಜ್ಞಾನಮತ್ತು ತಂತ್ರಜ್ಙಾನ ಇಲಾಖೆಗಳು ಸಂಯುಕ್ತ ಆಶ್ರಯದಲ್ಲಿ ಆಯೋಜಿಸಲಾಗಿದ್ದ ಸುಶಾಸನ ದಿವಸ ಅಂಗವಾಗಿ 10 ಸಾವಿರ ಯುವಜನರಿಗೆ ಉದ್ಯೋಗ ಪತ್ರ ನೀಡುವ ಕಾರ್ಯಕ್ರಮದಲ್ಲಿ ಭಾಗವಹಿಸಿ ಮಾತನಾಡಿದರು.
ಈ ಬೃಹತ್ ಪ್ರಮಾಣದ ಹೂಡಿಕೆ ಹರಿದು ಬಂದಾಗ ಅದಕ್ಕೆ ತಕ್ಕಂತ ಕೌಶಲ್ಯ ಯುತ ಮಾನವ ಸಂಪನ್ಮೂಲ ಅತಿ ಅಗತ್ಯ. ಇಲ್ಲವಾದರೆ ಹೂಡಿಕೆ ಯಶಸ್ವಿಯಾಗುವುದಿಲ್ಲ. ಕೌಶಲ್ಯ ಪಡೆಯುವ ಮೂಲಕ ಯುವಕರು ಉತ್ತಮ ವೇತನದ ಉದ್ಯೋಗ ಪಡೆಯಲು ಸಾಧ್ಯ ಎಂದು ಅವರು ತಿಳಿಸಿದರು.
*ಶಿಕ್ಷಣ, ಕೌಶಲ್ಯ, ವ್ಯಕ್ತಿತ್ವ ವಿಕಸನ*
ಕರ್ನಾಟಕದಇತಿಹಾಸದಲ್ಲಿ ಒಂದೇ ದಿವಸ 10 ಸಾವಿರ ಜನರಿಗೆ ಉದ್ಯೋಗ ಕೊಡುವ ಮೇಳ ಅಪರೂಪವಾದುದು ಎಂದು ಅಭಿಪ್ರಾಯ ವ್ಯಕ್ತಪಡಿಸಿದ ಮುಖ್ಯಮಂತ್ರಿಗಳು, ಇವತ್ತು, ಜಾಗತೀಕರಣ, ಉದಾರೀಕರಣ, ಖಾಸಗೀಕರಣದ ನಂತ ಎಲ್ಲ ದೇಶಗಳೊಂದಿಗೆ ಅನಿವಾರ್ಯವಾಗಿ ಪೈಪೋಟಿ ಮಾಡಬೇಕಾಗಿದೆ. ಇದಕ್ಕೆ ಶಿಕ್ಷಣ, ಕೌಶಲ್ಯ ಹಾಗೂ ವ್ಯಕ್ತಿತ್ವ ವಿಕಸನ ಅತಿ ಅಗತ್ಯ. ಈ ಮೂರನ್ನೂ ಒಗ್ಗೂಡಿಸಿ, ಯುವಕರಿಗೆ ಅವಕಾಶ ಕಲ್ಪಿಸುವ ಪ್ರಯತ್ನ ಮಾಡಿರುವುದು ಸರ್ಕಾರ ಕರ್ನಾಟಕ ಸರ್ಕಾರ ಮಾತ್ರ. ಸಚಿವ ಡಾ. ಅಶ್ವತ್ಥನಾರಾಯಣ ನೇತೃತ್ವದಲ್ಲಿ ತಮ್ಮ ಖಾತೆಯ ಎಲ್ಲ ಸಂಸ್ಥೆಗಳನ್ನು ಜೋಡಿಸಿ, ಶಿಕ್ಷಣ ಜೊತೆಗೆ ಉದ್ಯೋಗವನ್ನು ಕೊಟ್ಟು, ಇಡೀ ದೇಶಕ್ಕೆ ಮಾದರಿಯೆನಿಸಿದ್ದಾರೆ ಎಂದು ಮೆಚ್ಚುಗೆ ವ್ಯಕ್ತ ಪಡಿಸಿ, ಸಚಿವರು ಹಾಗೂ ಅಧಿಕಾರಿಗಳನ್ನು ಅಭಿನಂದಿಸಿದರು.
‘ನೀವು ಒಳ್ಳೆ ಉದ್ಯೋಗದಲ್ಲಿದ್ದರೆ ನಿಮ್ಮ ಸ್ವಾಭಿಮಾನ ಎತ್ತರದಲ್ಲಿರುತ್ತದೆ. ಅದರಲ್ಲಿ ಆತ್ಮವಿಶ್ವಾಸವಿರುತ್ತದೆ. ಆತ್ಮವಿಶ್ವಾಸದಿಂದ ದೊಡ್ಡ ಸಾಧನೆ ಮಾಡಲು ಸಾಧ್ಯವಾಗುತ್ತದೆ. ದೊಡ್ಡ ಸಾಧನೆ ಮಾಡಲು ಶಿಕ್ಷಣದೊಂದಿಗೆ ಕೌಶಲ್ಯ ಅಗತ್ಯ. ದಶಕದ ಹಿಂದೆ ಭಾರತ ದೇಶದಲ್ಲಿ ಜನಸಖ್ಯೆ ಅಭಿವೃದ್ಧಿಗೆ ಮಾರಕ ಎಂಬ ಭಾವನೆ ಪರಿಣತರಲ್ಲಿತ್ತು. ಅದನ್ನು ಸುಳ್ಳು ಮಾಡಿ, ನಮ್ಮೆಲ್ಲರ ನೆಚ್ಚಿನ ಪ್ರಧಾನಿ ನರೇಂದ್ರ ಮೋದಿಜಿಯವರು ಜನಸಂಖ್ಯೆಯನ್ನು ಸಂಪನ್ಮೂಲವಾಗಿ ಬಳಸಿಕೊಳ್ಳುವ ಬಗ್ಗೆ ಮಾತನಾಡಿದ ಮೊದಲ ಪ್ರಧಾನ ಮಂತ್ರಿ. ದೇಶದಲ್ಲಿ ಶೇ. 46 ರಷ್ಟಿರುವ ಯುವಕರನ್ನು ಆರ್ಥಿಕ, ಸಾಮಾಜಿಕ ಹಾಗೂ ಒಟ್ಟಾರೆ ಅಭಿವೃದ್ಧಿಗೆ ಬಳಸಿಕೊಳ್ಳಲು ಕೌಶಲ್ಯ ಅಗತ್ಯವೆಂದು ಅರಿತ ಪ್ರಧಾನಮಂತ್ರಿಯವರು ಸ್ಕಿಲ್ ಇಂಡಿಯಾ ಯೋಜನೆ ಪ್ರಾರಂಭಿಸಿದರು. ಭಾರತದೇಶ ದೀನ್ ದಯಾಳ್ ಉಪಾಧ್ಯಾಯ ಕೌಶಲ್ಯಾಭಿವೃದ್ಧಿ ಯೋಜನೆ ರೂಪಿಸಿದರು. ಈ ತರಬೇತಿ ಯಲ್ಲಿ ಆತ್ಮರಕ್ಷಣೆ, ಪ್ರೆಸೆಂಟೇಷನ್ ಸ್ಕಿಲ್, ಫಿನಿಷಿಂಗ್ ಸ್ಕಿಲ್ಸ್, ವ್ಯಕ್ತಿತ್ವ ವಿಕಸನದಿಂದ ಉತ್ತಮ ಅವಕಾಶ ದೊರೆಯುತ್ತದೆ ಎಂದು ವಿವರಿಸಿದರು.
*ಯಶಸ್ವಿಯಾಗಿ; ಇತರರಿಗೆ ನೆರವಾಗಿ*
ಈಗ ಎಲ್ಲರಿಗೂ ಶಿಕ್ಷಣದ ಅವಕಾಶವಿದೆ. ವೈಯಕ್ತಿಕವಾಗಿ ನೀವು ಯಶಸ್ಸು ಕಂಡರೆ, ಇತರರಿಗೆ ಸಹಾಯ ಮಾಡಲು ಸಾಧ್ಯ. ನಿಮ್ಮ ಜೀವನದ ಗುರಿ ಯಾವಾಗಲೂ ಕೊಡುವ ಸ್ಥಾನದಲ್ಲಿರಬೇಕು. ನಿಮ್ಮ ಕೈ ಭೂಮಿಯನ್ನು ನೋಡಬೇಕು. ಆಕಾಶವನ್ನಲ್ಲ. ಕೌಶಲ್ಯ ಅಭಿವೃದ್ಧಿಯಿಂದ ಇದು ಸಾಧ್ಯ ಎಂದು ಅವರು ಅಭಿಪ್ರಾಯಪಟ್ಟರು.
ಈ ದೇಶಕ್ಕೆ ಬಹಳ ದೊಡ್ಡ ಭವಿಷ್ಯವಿದೆ. ಪಾಶ್ಚಿಮಾತ್ಯ ದೇಶಗಳು ಆರ್ಥಿಕ ಹಿಂಜರಿತ ಕಾಣುತ್ತಿದೆ. ಚೈನಾ ದೇಶ ಕೋವಿಡ್ ನಿಂದಾಗಿ ತತ್ತರಿಸಿದೆ. ದೇಶದ ಆರ್ಥಿಕತೆಗೆ ಗಂಡಾಂತರ ಬಂದಿದೆ. ಬೇಡಿಕೆ ಹೆಚ್ಚಾಗಿದೆ. ಪೂರೈಕೆ ಕಡಿಮೆಯಾಗಿದೆ. ಇದನ್ನು ಸರಿದೂಗಿಸುವ ಸಾಮರ್ಥ್ಯ ಭಾರತ ದೇಶಕ್ಕೆ ಮಾತ್ರವಿದೆ ಎಂದು ನುಡಿದರು.
ಭಾರತದ ಆರ್ಥಿಕತೆ ಮೇಲೆರುವ ಸಂದರ್ಭದಲ್ಲಿ ನೀವಿದ್ದೀರಿ. ಭಾರತದ ಅಭಿವೃಧ್ಧಿಯ ವಿಮಾನದಲ್ಲಿ ನೀವು ಕುಳಿತಿದ್ದೀರಿ. ನಿಮ್ಮ ಭವಿಷ್ಯ ನಿಮ್ಮ ಕೈಯಲ್ಲಿದೆ. ಕಠಿಣ ಪರಿಶ್ರಮ, ಏಕಾಗ್ರತೆಯಿಂದ ಮಾತ್ರ ಯಶಸ್ಸು ಸಾಧ್ಯ ಎಂದು ಅವರು ನುಡಿದರು.
*ಮುದ್ರಾ ಯೋಜನೆ: ರಾಜ್ಯದ 25 ಲಕ್ಷ ಯುವಕರಿಗೆ ಅನುಕೂಲ*
ಪ್ರಧಾನಿಯವರು ಸ್ಕಿಲ್ ಇಂಡಿಯಾದೊಂದಿಗೆ ಯುವಜನರ ಸ್ವಾಭಿಮಾನಿ, ಸ್ವಾವಲಂಬನೆಯ ಬದುಕಿದಾಗಿ ಮುದ್ರಾ ಸಾಲ ಯೋಜನೆ ಜಾರಿಗೆ ತಂದರು. ಭಾರತ ದೇಶದಲ್ಲಿ 6.5 ಕೋಟಿ ಯುವಕರು ಹಾಗೂ ಕರ್ನಾಟಕದಲ್ಲಿ 25 ಲಕ್ಷ ಯುವಜನರಿಗೆ ಇದರಿಂದ ಅನುಕೂಲವಾಗಿದೆ. ನೀವು ಕೂಡ ಈ ಸಾಲ ಸೌಲಭ್ಯ ಪಡೆಯಬಹುದು. ಉದ್ಯೋಗ ಪಡೆಯುವುದಕ್ಕಿಂತ ಉದ್ಯಮಿಗಳಾಗುವ ಪ್ರಯತ್ನ ಮಾಡಬೇಕು ಎಂದು ಅವರು ಸಲಹೆ ನೀಡಿದರು.
ಭಾರತ ದೇಶಕ್ಕೆ, ಅದರಲ್ಲೂ ಕರ್ನಾಟಕಕ್ಕೆ ಉತ್ತಮ ಭವಿಷ್ಯವಿದೆ. ರಾಜ್ಯದಲ್ಲಿ ಬೇರೆಲ್ಲೂ ಜಾರಿಯಲ್ಲಿ ಇಲ್ಲದ, ಉದ್ಯೋಗ ನೀತಿಯನ್ನು ಜಾರಿ ಮಾಡಲಾಗಿದೆ. ಹೆಚ್ಚು ಉದ್ಯೋಗ ನೀಡುವ ಉದ್ಯಮಗಳಿಗೆ ಪ್ರೋತ್ಸಾಹಕ ನೀಡಲಾಗುತ್ತಿದೆ. ಕನ್ನಡಿಗರಿಗೆ ಹೆಚ್ಚು ಉದ್ಯೋಗ ದೊರೆಯಲಿ ಎಂಬ ಆಶಯದೊಂದಿಗೆ ಈ ನೀತಿ ಜಾರಿಗೆ ತರಲಾಗಿದೆ ಎಂದು ಅವರು ತಿಳಿಸಿದರು.
ಅಂತೆಯೇ ರಾಜ್ಯದಲ್ಲಿ ಸಂಶೋಧನೆ ಮತ್ತು ಅಭಿವೃದ್ಧಿ ನೀತಿ ಜಾರಿಯಲ್ಲಿದೆ. ಬೆಂಗಳೂರಿನಲ್ಲಿ ವಿದ್ಯುತ್ ಚಾಲಿತ ವಾಹನಗಳ ಕುರಿತ ಅತಿ ಹೆಚ್ಚು ಸಂಖ್ಯೆಯ ಸಂಶೋಧನೆ ಮತ್ತು ಅಭಿವೃದ್ಧೀ ಕೇಂದ್ರಗಳಿವೆ. ಹೆಚ್ಚು ವಿದ್ಯುತ್ ಚಾಲಿತ ವಾಹನ ಬಳಕೆದಾರರೂ ಕರ್ನಾಟಕದಲ್ಲಿದ್ದಾರೆ. ಆದರೆ ವಿದ್ಯುತ್ ಚಾಲಿನ ವಾಹನಗಳ ತಯಾರಿಕೆ ಇತರ ರಾಜ್ಯಗಳಲ್ಲಿ ಆಗುತ್ತಿದೆ. ತಯಾರಿಕೆಯೂ ಕರ್ನಾಟಕದಲ್ಲಿ ಮಾಡುವಂತೆ ಉದ್ಯಮಿಗಳ ಮನವೊಲಿಸಲಾಗುತ್ತಿದೆ ಎಂದು ತಿಳಿಸಿದರು.
*ಗ್ರಾಮೀಣ ಮಹಿಳೆಯರು, ಯುವಕರಿಗೆ ವಿಶೇಷ ಯೋಜನೆ:*
ಗ್ರಾಮೀಣ ಮಹಿಳೆಯರು, ಯುವಕರಿಗೆ ಉದ್ಯೋಗಾವಕಾಶ ಕಲ್ಪಿಸಲು ವಿಶೇಷ ಕಾರ್ಯಕ್ರಮ ರೂಪಿಸಲಾಗಿದೆ. ಸ್ತ್ರೀ ಸಾಮರ್ಥ್ಯ ಯೋಜನೆಯಡಿ 23 ಯೋಜನೆಗಳನ್ನು ಗುರುತಿಸಲಾಗಿದ್ದು, ಅವುಗಳಿಗೆ 5 ಲಕ್ಷ ರೂ. ವರೆಗೆ ಹಣಕಾಸು ಸೌಲಭ್ಯ ಒದಗಿಸಲಾಗುತ್ತಿದ್ದು, ಈ ಮೊತ್ತವು 1.5 ಲಕ್ಷ ರೂ. ಸಬ್ಸಿಡಿಯನ್ನು ಒಳಗೊಂಡಿದೆ. 5 ಲಕ್ಷ ಹೆಣ್ಣುಮಕ್ಕಳಿಗೆ ಉದ್ಯೋಗ ಒದಗಿಸುವ ಗುರಿ ಹೊಂದಲಾಗಿದೆ.
ಅಂತೆಯೇ ಸ್ವಾಮಿ ವಿವೇಕಾನಂದ ಯುವಶಕ್ತಿ ಯೋಜನೆಯಡಿ ಗ್ರಾಮೀಣ ಯುವಕರ ಸ್ವಸಹಾಯ ಸಂಘಗಳಿಗೆ ಸ್ವಯಂ ಉದ್ಯೋಗ ಕೈಗೊಳ್ಳಲು ಎಂಡ್-ಟು-ಎಂಡ್ ನೆರವು ನೀಡಲಾಗುತ್ತಿದೆ. ಈ ವರ್ಷ 5 ಲಕ್ಷ ಯುವಕರಿಗೆ ಅನುಕೂಲ ಕಲ್ಪಿಸುವ ಗುರಿಯಿದೆ. ಸತತ 5 ವರ್ಷ ಈ ಯೋಜನೆಯನ್ನು ಮುನ್ನಡೆಸಿದಲ್ಲಿ ಗ್ರಾಮೀಣ ಪ್ರದೇಶದ ಎಲ್ಲ ಯುವಕರಿಗೆ ಉದ್ಯೋಗ ದೊರೆಯಲಿದೆ ಎಂದು ತಿಳಿಸಿದರು.
*ದುಡಿಯುವ ವರ್ಗಗಳಿಗೆ ಆದ್ಯತೆ*
ನಮ್ಮ ಸರ್ಕಾರ ಶಿಕ್ಷಣದ ಮೂಲಕ ಉದ್ಯೋಗಕ್ಕೆ ದಾರಿ ಮಾಡಿದೆ. ರೈತ ವಿದ್ಯಾನಿಧಿ, ಕೃಷಿ ಕೂಲಿಕಾರರು, ಮೀನುಗಾರರು, ಟ್ಯಾಕ್ಸಿ ಚಾಲಕರು, ಟೈಲರುಗಳು , ನೇಕಾರರು ಮೊದಲಾದ ದುಡಿಯುವ ವರ್ಗದವರ ಮಕ್ಕಳಿಗೆ ಉತ್ತಮ ಶಿಕ್ಷಣ ಒದಗಿಸಲು ಪೂರಕವಾಗಿ ವಿದ್ಯಾನಿಧಿ ಯೋಜನೆಯನ್ನು ಜಾರಿಗೆ ತರಲಾಗಿದೆ.
ದುಡಿಮೆಯೇ ದೊಡ್ಡಪ್ಪ ಎಂಬ ನೀತಿಯೊಂದಿಗೆ ದುಡಿಯುವ ವರ್ಗಗಳವರ ಅನುಕೂಲಕ್ಕಾಗಿ ಈ ಯೋಜನೆ ಜಾರಿಗೊಳಿಸಲಾಗಿದೆ. ಮುಂಬರುವ ಆಯವ್ಯಯದಲ್ಲಿ ಯುವಕರಿಗೆ ಉತ್ತಮ ಶಿಕ್ಷಣ, ತರಬೇತಿ ನೀಡುವ ಕುರಿತಾದ ಯೋಜನೆಗಳನ್ನು ರೂಪಿಸಲಾಗುವುದು.
*ಕೌಶಲ್ಯಾಭಿವೃದ್ಧಿಗೆ ಸಾಂಸ್ಥಿಕ ರೂಪ*
ಕೌಶಲ್ಯಾಭಿವೃದ್ಧಿಗೆ ನಮ್ಮ ಸರ್ಕಾರ ಸಾಂಸ್ಥಿಕ ರೂಪ ನೀಡಿ, ಅಕ್ರಮವನ್ನು ತಡೆಗಟ್ಟಿದೆ. ಖಾಸಗಿ ಸಹಭಾಗಿತ್ವದೊಂದಿಗೆ ಈಗಾಗಲೇ 150 ಐಟಿಐ ಗಳ ಉನ್ನತೀಕರಣವಾಗಿದ್ದು, ಒಟ್ಟು 180 ಐಟಿಐಗಳನ್ನು ಉನ್ನತೀಕರಿಸಲಾಗುತ್ತಿದೆ. ಆಯಾ ಭಾಗದ ಯುವಜನರಿಗೆ ಅಲ್ಪಾವಧಿ ಕೋರ್ಸ್ಗಳನ್ನು ಆಯೋಜಿಸುವಂತೆ ಇಲಾಖೆಗೆ ಸಲಹೆ ನೀಡಲಾಗಿದೆ. ಈ ಐಟಿಐಗಳ ಉನ್ನತೀಕರಣಕ್ಕೆ ಖಾಸಗಿ ವಲಯದವರ ಕೊಡುಗೆಯನ್ನು ಕೃತಜ್ಞತೆಯಿಂದ ಸ್ಮರಿಸುವುದಾಗಿ ಮುಖ್ಯಮಂತ್ರಿಗಳು ತಿಳಿಸಿದರು
*ದೂರದೃಷ್ಟಿಯ ಅಜಾತಶತ್ರು ನಾಯಕ ವಾಜಪೇಯಿ*
ಮಾಜಿ ಪ್ರಧಾನಿ ವಾಜಪೇಯಿ ಅವರ ಜನ್ಮದಿನವನ್ನು ಸುಶಾಸನ ದಿವಸ ಎಂದು ಆಚರಿಸಲಾಗುತ್ತಿದೆ. ಅವರು ಶಾಸ್ತ್ರೀಜಿಯವರ ಜೈ ಜವಾನ್ ಜೈ ಕಿಸಾನ್ ಘೋಷವಾಕ್ಯಕ್ಕೆ ಜೈ ವಿಜ್ಞಾನ್ ಎಂದು ಸೇರ್ಪಡೆ ಮಾಡಿದ ದೂರದೃಷ್ಟಿಯ ಶ್ರೇಷ್ಠ ನಾಯಕ; ಅಜಾತ ಶತ್ರು.
ಪೋಖ್ರಾನ್ ಪರಮಾಣು ಬಾಂಬ್ ಸ್ಫೋಟದ ಮೂಲಕ ಭಾರತದ ಪರಮಾಣು ಶಸ್ತ್ರ ಸಾಮರ್ಥ್ಯವನ್ನು ಜಗತ್ತಿಗೆ ತಿಳಿಸಿದರು. ಸರ್ವಶಿಕ್ಷಣ ಅಭಿಯಾನ, ಪ್ರಧಾನ ಮಂತ್ರಿ ಗ್ರಾಮೀಣ ಸಡಕ್ ಯೋಜನಾ, ಸುವರ್ಣ ಚತುಷ್ಪಥ ರಸ್ತೆಗಳ ಮೂಲಕ ದೇಶದ ಅಭಿವೃದ್ಧಿಗೆ ಮಹತ್ತರ ಕೊಡುಗೆ ನೀಡಿದರು. ಅಂತರರಾಷ್ಟ್ರೀಯ ಮಟ್ಟದಲ್ಲಿ ದೇಶದ ಬೆಳವಣಿಗೆಗೆ ಭದ್ರ ಅಡಿಪಾಯ ಹಾಕಿದರು. ಸುಶಾಸನ ದಿನವೆಂದು ಆಚರಿಸುವ ಅವರ ಜನ್ಮದಿನದಂದು ಮೂರೂ ಇಲಾಖೆಗಳು ಉತ್ತಮ ಆಡಳಿತದ ಫಲಿತಾಂಶವಾಗಿ 10 ಸಾವಿರ ಯುವಕರಿಗೆ ಉದ್ಯೋಗ ಪತ್ರ ವಿತರಿಸಿರುವುದು ಅಭಿನಂದನೀಯ ಎಂದು ತಿಳಿಸಿದರು.
ಉನ್ನತ ಶಿಕ್ಷಣ, ಕೌಶಲ್ಯಾಭಿವೃದ್ಧಿ ಹಾಗೂ ಐಟಿ ಬಿಟಿ ಮತ್ತು ವಿಜ್ಞಾನ, ತಂತ್ರಜ್ಞಾನ ಸಚಿವ ಡಾ. ಅಶ್ವತ್ಥನಾರಾಯಣ, ಕೌಶಲ್ಯಾಭಿವೃದ್ಧಿ ಇಲಾಖೆಯ ಪ್ರಧಾನ ಕಾರ್ಯದರ್ಶಿ ಡಾ.ಎಸ್. ಸೆಲ್ವಕುಮಾರ್ ಮತ್ತು ಇತರ ಹಿರಿಯ ಅಧಿಕಾರಿಗಳು ಸಮಾರಂಭದಲ್ಲಿ ಭಾಗವಹಿಸಿದ್ದರು.
[25/12, 9:34 PM] Cm Ps: ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿಯವರು ಇಂದು ಬೆಂಗಳೂರಿನ ಪೇಜಾವರ ಮಠದ ಪೀಠಾಧ್ಯಕ್ಷರಾದ ಶ್ರೀ ವಿಶ್ವ ಪ್ರಸನ್ನ ತೀರ್ಥ ಸ್ವಾಮೀಜಿಯವರನ್ನು ಭೇಟಿ ಮಾಡಿ ಆಶೀರ್ವಾದ ಪಡೆದರು.
[25/12, 9:39 PM] Cm Ps: ಆಳ್ವಾಸ್ ಶಿಕ್ಷಣ ಸಂಸ್ಥೆಯಲ್ಲಿ ಅಂತರರಾಷ್ಟ್ರೀಯ ಸಾಂಸ್ಕೃತಿಕ ಜಾಂಬೂರಿ-
*ಸ್ಕೌಟ್ಸ್ ಮತ್ತು ಗೈಡ್ಸ್ ನಿಂದ ಚರಿತ್ರೆ ಹಾಗೂ ಚಾರಿತ್ರ್ಯದ ಬೆಳೆವಣಿಗೆ – ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ*
ಮಂಗಳೂರು, ಡಿಸೆಂಬರ್ 25 :
ಸಣ್ಣವಯಸ್ಸಿನಲ್ಲಿ ಚರಿತ್ರೆ ಮತ್ತು ಶಿಸ್ತು ರೂಪಿಸುವ ಸುಸಮಯವಾಗಿದ್ದು, ಚರಿತ್ರೆಯ ಜೊತೆಗೆ ಚಾರಿತ್ರ್ಯ ಬೆಳೆಸುವಲ್ಲಿ ಸ್ಕೌಟ್ಸ್ ಮತ್ತು ಗೈಡ್ಸ್ ಬೆಳೆಸುತ್ತದೆ ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ತಿಳಿಸಿದರು.
ಅವರು ಇಂದು ಮೂಡುಬಿದಿರೆಯ* *ಆಳ್ವಾಸ್* *ಶಿಕ್ಷಣ ಸಂಸ್ಥೆಯ* ಸಂಕೀರ್ಣದಲ್ಲಿ *ಭಾರತ್ ಸೌಟ್ಸ್ ಮತ್ತು ಗೈಡ್ಸ್* ವತಿಯಿಂದ ಆಯೋಜಿಸಲಾಗಿರುವ *ಅಂತರಾಷ್ಟ್ರೀಯ ಸಾಂಸ್ಕೃತಿಕ* *ಜಾಂಬೂರಿ ಕಾರ್ಯಕ್ರಮ ದಲ್ಲಿ ಮಾತನಾಡಿದರು.
ಚಿಕ್ಕವಯಸ್ಸಿನಲ್ಲಿ ಮಕ್ಕಳಲ್ಲಿ ಮೌಲ್ಯ, ಆದರ್ಶಗಳನ್ನು ತುಂಬಿ, ಹಿರಿಯರಿಗೆ ಗೌರವಾದರಗಳನ್ನು ತೋರುವ, ಕಿರಿಯರಿಗೆ ಪ್ರೀತಿಯನ್ನು ತೋರುವ ಗುಣಧರ್ಮವನ್ನು ಇಲ್ಲಿ ತಿಳಿಹೇಳಲಾಗುತ್ತದೆ. ದೇಶದಲ್ಲಿ ಚರಿತ್ರೆ ಇದೆ. ಆದರೆ ಚಾರಿತ್ರ್ಯ ಬೇಕಾಗಿದೆ ಎಂದರು.
*ರಾಷ್ಟ್ರನಿರ್ಮಾಣದ ಸಂಕಲ್ಪ :*
ಸಾಂಸ್ಕೃತಿಕವಾದ ಹಾಗೂ ಕಣ್ಣಿಗೆ ಹಬ್ಬವನ್ನುಂಟು ಮಾಡುವ ಕಾರ್ಯಕ್ರಮ ಜಂಬೂರಿ. ರಾಷ್ಟ್ರ ಶಕ್ತಿಯುತವಾಗಿ, ಸುಸಂಸ್ಕೃತವಾಗಿ, ಜಾಗತಿಕವಾಗಿ ಗಟ್ಟಿಗೊಂಡಿದೆ ಎಂಬುದು ಇಂದಿನ ಕಾರ್ಯಕ್ರಮದಲ್ಲಿ ತಿಳಿಯುತ್ತದೆ. ಪ್ರಧಾನಿ ಮೋದಿಯವರ ರಾಷ್ಟ್ರನಿರ್ಮಾಣದ ಕರೆಯನ್ನು ಸಾಕಾರಗೊಲಿಸುವ ಸಂಕಲ್ಪವನ್ನು ಇಲ್ಲಿ ಮಾಡಲಾಗಿದೆ. ಭಾರತ ದೇಶ ಶ್ರೇಷ್ಟ ಪರಂಪರೆ, ಇತಿಹಾಸ ಹಾಗೂ ಸಂಸ್ಕೃತಿಯಿಂದ ಕೂಡಿದೆ. ಭಾರತೀಯತೆ ಎಂದರೆ ಮಾನವೀಯತೆ, ಇಂತಹ ಸಂಸ್ಕೃತಿಯನ್ನು ಉಳಿಸಿಕೊಳ್ಳುವಲ್ಲಿ ಸ್ಕೌಟ್ಸ್ ಮತ್ತು ಗೈಡ್ಸ್ ನ 100 ವರ್ಷದ ಸಾಧನೆ ಪ್ರಮುಖ ಪಾತ್ರವನ್ನು ವಹಿಸುತ್ತದೆ. ಚರಿತ್ರೆಯನ್ನು ನಿರ್ಮಿಸುವ ಸಂಸ್ಥೆ. ದೇಶದಲ್ಲಿ ಆಚಾರರಿದ್ದಾರೆ. ಬೇಕಾಗಿರುವುದು ಆಚರಣೆ. ಸ್ವಾಮಿ ವಿವೇಕಾನಂದರು, ಶಂಕರಾಚಾರ್ಯರು, ದಾಸವರೇಣ್ಯರು ಇರುವ ದೇಶದಲ್ಲಿ ದೊಡ್ಡ ತತ್ವಭಂಡಾರವಿದೆ ಎಂದರು.
*ಸದ್ಚಾರಿತ್ರ್ಯ ಹಾಗೂ ಮೌಲ್ಯಗಳನ್ನು ಅಳವಡಿಸುವ ಆಳ್ವಾಸ್ ಸಂಸ್ಥೆ :*
ಪಾಶ್ಚಿಮಾತ್ಯದ ದಾಳಿಯಿಂದ ಸಾಂಸ್ಕೃತಿಕ ಗೊಂದಲ ಯುವಪೀಳಿಗೆಗೆ ಉಂಟಾಗಿದೆ. ನಮ್ಮಲ್ಲೇನಿದೆ ಎಂಬುದು ನಾಗರಿಕತೆ , ನಾವೇನಾಗಿದ್ದೇವೆ ಎಂಬುದು ಸಂಸ್ಕೃತಿ. ಪರೋಪಕಾರಿ ಧರ್ಮ, ದಯೆ, ಸತ್ಯಮಾರ್ಗಗಳನ್ನು ಮುಂದುವರೆಯುತ್ತಿದ್ದೇವೆ ಎಂಬುದು ತಿಳಿದುಕೊಳ್ಳಬೇಕು. ಸದ್ಚಾರಿತ್ರ್ಯ ಹಾಗೂ ಮೌಲ್ಯಗಳನ್ನು ಅಳವಡಿಸಿಕೊಳ್ಳುವ ಮೂಲಕ ಸಂಸ್ಕೃತಿಯನ್ನು ಬೆಳೆಸಿಕೊಳ್ಳಬೇಕು. ನಮ್ಮ ಸಂಸ್ಕೃತಿಗೆ ಆಳವಾದ ಬೇರುಗಳನ್ನು ಸ್ಥಾಪಿಸುವ ಕೆಲಸವನ್ನು ಆಳ್ವಾಸ ಸಂಸ್ಥೆ ಮಾಡುತ್ತಿದೆ. ಈ ದೇಶದಲ್ಲಿ ವಿವಿಧ ಜಾತಿ ಭಾಷೆಗಳಿದ್ದರೂ , ನಮ್ಮನ್ನೆಲ್ಲ ಒಂದುಗೂಡಿಸಿರುವುದು ಭಕ್ತಿಯ ಚಳವಳಿ. ಭಕ್ತಿಯ ಚಳವಳಿ ಭಾರತದಲ್ಲಿ ಮಾತ್ರ ಕಾಣಬಹುದಾಗಿದೆ. ರಾಮಾಯಣ, ಶಂಕರಾಚಾರ್ಯ ರಿಂದ ಬಸವ, ಗಾಂಧೀಜೀ,ಅಂಬೇಡ್ಕರ್ ರ ವರೆಗೆ ಅನೇಕ ಭಕ್ತಿ ಚಳವಳಿಗಳು ನಡೆದಿವೆ ಎಂದರು.
*ಧರ್ಮದ ಹೆಸರಿನಲ್ಲಿ ಹಿಂಸೆ ಖೇದಕರ :*
ವಿಶ್ವದಲ್ಲಿ ಧರ್ಮದ ಹೆಸರಿನಲ್ಲಿ ಹಿಂಸೆಗಳು ನಡೆಯುತ್ತಿರುವುದು ಖೇದಕರ ಸಂಗತಿ. ಶಾಂತಿ ಪರಿಪಾಲನೆ, ಇನ್ನೊಬ್ಬರನ್ನು ಗೌರವದಿಂದ ಕಾಣುವುದನ್ನು ತಿಳಿಸುವುದೇ ಧರ್ಮ. ಆದರೆ ಧರ್ಮದ ಹೆಸರಿನಲ್ಲಿ ಭಯೋತ್ಪಾದನೆ ನಡೆಯುತ್ತಿದ್ದು , ಇದು ಅಂತ್ಯದ ಆರಂಭ ಎಂಬುದು ನನ್ನ ಅನಿಸಿಕೆ. ಇದನ್ನು ತಡೆಗಟ್ಟುವ ಶಕ್ತಿ ಭಾರತಕ್ಕೆ ಮಾತ್ರ ಇದೆ. ಮನ:ಪರಿವರ್ತನೆಯಿಂದ ಮಾತ್ರ ಇದು ಸಾಧ್ಯ. ಮನ:ಪರಿವರ್ತನೆ ಸಾಂಸ್ಕೃತಿಕ ಚಳುವಳಿಗೆ ಕಾರಣವಾಗಿದ್ದು, ಇದನ್ನು ಆಳ್ವಾಸ್ ಸಂಸ್ಥೆ ಸಾಧ್ಯವಾಗಿಸುತ್ತಿದೆ. 21ನೇಯ ಶತಮಾನ, ಜ್ಞಾನದ ಶತಮಾನ. ಆಳ್ವಾಸ್ ಸಂಸ್ಥೆ ಸರಸ್ವತಿಯ ಮಂದಿರ. ಪರಮಹಂಸ ಸರಸ್ವತಿ ದೇವರ ವಾಹನ. ಈ ಪಕ್ಷಿ ಎತ್ತರಕ್ಕೆ ಹಾರುವ ಎತ್ತರಕ್ಕೆ ಇಲ್ಲಿ ಶಿಕ್ಷಣ ಪಡೆಯುತ್ತಿರುವ ಮಕ್ಕಳು ಕೀರ್ತಿ ಗಳಿಸಬೇಕು ಎಂದರು.
ಸಮಾರಂಭದಲ್ಲಿ ಶಿಕ್ಷಣ ಸಚಿವ ಬಿ.ಸಿ.ನಾಗೇಶ್ ,ಇಂಧನ ಸಚಿವ ಸುನಿಲ್ ಕುಮಾರ್, , ಶಾಸಕರಾದ ಸಿ.ಟಿ.ರವಿ, ಶ್ರೀಪತಿ ಭಟ್, ಅಖಿಲ ಭಾರತ ಸ್ಕೌಟ್ಸ್ ಮತ್ತು ಗೈಡ್ಸ್ ನ ಜೆನರಲ್ ಸೆಕ್ರೆಟರಿ ಅನಿಲ್ ಜೈನ್ , ಕರ್ನಾಟಕ ಸ್ಕೌಟ್ಸ್ ಮತ್ತು ಗೈಡ್ಸ್ ನ ಮುಖ್ಯಸ್ಥ ಪಿ.ಜಿ.ಆರ್. ಸಿಂಧ್ಯಾ, ಆಳ್ವಾಸ್ ಶಿಕ್ಷಣ ಸಂಸ್ಥೆ ಮುಖ್ಯಸ್ಥ ಮೋಹನ್ ಆಳ್ವಾ, ಸೇರಿದಂತೆ ಹಲವು ಗಣ್ಯರು ಉಪಸ್ಥಿತರಿದ್ದರು.
[25/12, 10:22 PM] Cm Ps: *ನಾಳೆಯಿಂದ ಅಧಿವೇಶನ ಯಥಾ ಪ್ರಕಾರ ನಡೆಯುತ್ತದೆ: ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ*
ಮಂಗಳೂರು: ಬೆಳಗಾವಿಯಲ್ಲಿ ನಡೆಯುತ್ತಿರುವ ಚಳಿಗಾಲದ ಅಧಿವೇಶನ ಎಂದಿನಂತೆ ಯಥಾವತ್ತಾಗಿ ನಡೆಯುತ್ತದೆ ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರು ಹೇಳಿದರು.
ಇಂದು ನಗರದಲ್ಲಿ ಅವರು ಮಾಧ್ಯಮದವರೊಂದಿಗೆ ಮಾತನಾಡಿದರು.
ಬೆಳಗಾವಿಯ ಚಳಿಗಾಲದ ಅಧಿವೇಶನದಲ್ಲಿ ಯಾವುದೇ ಬದಲಾವಣೆ ಇಲ್ಲ. ಎಂದಿನಂತೆ ಸದನದ ಕಾರ್ಯಕಲಾಪಗಳನ್ನು ನಡೆಸುವುದಾಗಿ ಸಿಎಂ ಬೊಮ್ಮಾಯಿ ಸ್ಪಷ್ಟಪಡಿಸಿದರು.
ಮೂಡಬಿದಿರೆಯಲ್ಲಿ ಸ್ಕೌಟ್ಸ್ ಆ್ಯಂಡ್ ಗೈಡ್ಸ್ ಕಾರ್ಯಕ್ರಮ ನಿಗದಿಯಾಗಿತ್ತು. ನಮ್ಮ ಮೋಹನ್ ಆಳ್ವ ಮತ್ತು ಪಿಜಿಆರ್ ಸಿಂದ್ಯಾ ಅವರ ನೇತೃತ್ವದಲ್ಲಿ ಬಹಳ ಉತ್ತಮವಾದ ಕಾರ್ಯಕ್ರಮ ಆಗುತ್ತಿದೆ. ಪೂರ್ವ ನಿಯೋಜಿಯ ಕಾರ್ಯಕ್ರಮಕ್ಕಾಗಿ ಅಧಿವೇಶನದ ಸಮಯದಲ್ಲಿ ಬಿಡುವು ಮಾಡಿಕೊಂಡು ಬಂದಿದ್ದೇನೆ. ಸ್ಕೌಟ್ಸ್ ಆ್ಯಂಡ್ ಗೈಡ್ಸ್ ಎನ್.ಸಿ.ಸಿ ತರಹ ಮಕ್ಕಳಲ್ಲಿ ಶಿಸ್ತು ಮತ್ತು ದೇಶಪ್ರೇಮವನ್ನು ತರುವ ಸಂಸ್ಥೆಯಾಗಿದೆ. ಕರ್ನಾಟಕದಲ್ಲಿ ಸ್ಕೌಟ್ಸ್ ಮತ್ತು ಗೈಡ್ಸ್ ಸಂಸ್ಥೆ ಉತ್ತಮವಾಗಿದ್ದು ಸರ್ಕಾರ ಅದಕ್ಕೆ ಸದಾಕಾಲ ಸಹಕಾರ ನೀಡುತ್ತ ಬಂದಿದೆ. ಈ ಬಾರಿ ದೇಶ ವಿದೇಶದಿಂದ ಎಲ್ಲರೂ ಬಂದಿದ್ದಾರೆ. ಅಲ್ಲಿಗರ ಹೋಗಿ ನನ್ನ ಬೆಂಬಲ ಮತ್ತು ಉತ್ತೇಜನ ಕೊಡುವುದು ನನ್ನ ಕರ್ತವ್ಯ. ಅದಕ್ಕಾಗಿ ಬಂದಿದ್ದೇನೆ ಎಂದು ಸಿಎಂ ಬೊಮ್ಮಾಯಿ ತಿಳಿಸಿದರು.
*ಸೂರತ್ಕಲ್ ಕೊಲೆ; ಪೊಲೀಸರಿಂದ ಕ್ರಮ*
ನಿನ್ನೆ ಆ ಘಟನೆ ನಡೆಯಬಾರದಿತ್ತು. ಇದು ದುರದೃಷ್ಟಕರ ಘಟನೆ. ಈಗಾಗಲೇ ಪೊಲೀಸರು ಕ್ರಮ ತೆಗೆದುಕೊಳ್ಳುತ್ತಿದ್ದಾರೆ. ಪೊಲೀಸರ ತನಿಖೆ ಪ್ರಗತಿಯಲ್ಲಿದ್ದು ಸಾಕ್ಷ್ಯ ಸಂಗ್ರಹಿಸಲಾಗುತ್ತಿದೆ. ಆದಷ್ಟು ಬೇಗ ಆರೋಪಿಗಳನ್ನು ಬಂಧಿಸಿ ವಿಚಾರಣೆಗೆ ಒಳಪಡಿಲಸಾಗುತ್ತದೆ. ವಿಚಾರಣೆ ವೇಳೆ ಯಾವ ಕಾರಣಕ್ಕಾಗಿ, ಹಿನ್ನೆಲೆ ಏನ? ಸತ್ಯಾಸತ್ಯತೆ ಹೊರ ಬರುತ್ತದೆ ಎಂದರು.
*ದಕ್ಷಿಣ ಕನ್ನಡ ಜನರಿಗೆ ಸಿಎಂ ಮನವಿ*
ದಕ್ಷಿಣ ಕನ್ನಡ, ಉಡುಪಿಯ ಜನರು ಊಹಾಪೋಹಗಳಿಗೆ ಅವಕಾಶ ಕೊಡದೇ, ಶಾಂತಿ- ಸುವ್ಯವಸ್ಥೆಗೆ ದಕ್ಕೆಯಾಗದಂತೆ ಯಾರು ಕೂಡ ನಡೆದುಕೊಳ್ಳಬಾರದು. ಶಾಂತಿಯುತವಾಗಿ ಪರಸ್ಪರ ವಿಶ್ವಾಸದಿಂದ ಹೋಗುವುದು ಅವಶ್ಯಕವಾಗಿದೆ. ಪೊಲೀಸರು ಯಾವುದೇ ಒತ್ತಾಯ, ಒತ್ತಡವಿಲ್ಲದೇ ಮುಕ್ತವಾಗಿ ತನಿಖೆ ಮಾಡುತ್ತಾರೆ. ಪ್ರಕರಣದಲ್ಲಿ ಯಾರೇ ಇರಲಿ, ಅವರ ಮೇಲೆ ನೂರಕ್ಕೆ ನೂರು ಕಾನೂನಾತ್ಮಕ ಕ್ರಮ ನಾವು ತೆಗೆದುಕೊಳ್ಳುತ್ತೇವೆ. ಸಮಾಜದಲ್ಲಿ ಹಿಂಸೆಗೆ ದಾರಿ ಮಾಡಿಕೊಡುವರನ್ನು ಹತ್ತಿಕ್ಕುವ ಅವಶ್ಯಕತೆ ಇದೆ. ಅದು ನಮ್ಮ ಕರ್ತವ್ಯ, ಸಮಾಜದ ಕರ್ತವ್ಯ. ಕ್ರಿಯೆಗೆ ಪ್ರತಿಕ್ರಿಯೆ ಅಂತ ಅಲ್ಲ. ಪೊಲೀಸರು ನಿಷ್ಪಕ್ಷಪಾತವಾಗಿ, ಮುಕ್ತವಾಗಿ ತನಿಖೆ ಮಾಡುತ್ತಾರೆ ಎಂದರು.
Post a Comment