[05/01, 10:37 AM] Cm Ps: *ಬೆಳಗಾವಿ ಅಪಘಾತ: ಮೃತರ ಕುಟುಂಬಕ್ಕೆ ತಲಾ 5 ಲಕ್ಷ ರೂ.ಗಳ ಪರಿಹಾರ: ಸಿಎಂ ಬೊಮ್ಮಾಯಿ*
ಬೆಂಗಳೂರು, ಜನವರಿ 05: ಬೆಳಗಾವಿಯಲ್ಲಿ ಸವದತ್ತಿ ಎಲ್ಲಮ್ಮನ ದರ್ಶನ ಮಾಡಲು ತೆರಳಿದ್ದವರ ವಾಹನ ಭೀಕರ ಅಪಘಾತಕ್ಕೀಡಾಗಿ ಆರು ಜನ ನಿಧನರಾಗಿದ್ದು, ಮೃತರ ಕುಟುಂಬಕ್ಕೆ ತಲಾ 5 ಲಕ್ಷ ರೂ.ಗಳ ಪರಿಹಾರ ಹಾಗೂ ಗಾಯಾಳುಗಳ ಚಿಕಿತ್ಸೆಯ ವೆಚ್ಚವನ್ನು ಸರ್ಕಾರವೇ ಭರಿಸಲಿದೆ. ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ತಿಳಿಸಿದರು.
ಅವರು ಇಂದು ಮಾಧ್ಯಮದವರೊಂದಿಗೆ ಮಾತನಾಡಿ ಈ ವಿಷಯ ತಿಳಿಸಿದರು.
ಈಗಾಗಲೇ ಜಿಲ್ಲಾಡಳಿತದೊಂದಿಗೆ ಸಂಪರ್ಕದಲ್ಲಿದ್ದು,ಪ್ರಕರಣದ ತನಿಖೆ ಮಾಡಲು ಕೂಡ ಸೂಚಿಸಲಾಗಿದೆ ಎಂದರು.
*ದಶಪಥ ರಸ್ತೆ ಲೋಕಾರ್ಪಣೆ : ಪರಿಶೀಲಿಸಿ ತೀರ್ಮಾನ*
ದಶಪಥ ರಸ್ತೆಯ ವೈಮಾನಿಕ ಸಮೀಕ್ಷೆಯಲ್ಲಿ ಲೋಪದೋಷಗಳು ಕಂಡುಬಂದಿರುವ ಹಿನ್ನೆಲೆಯಲ್ಲಿ ಈ ತಿಂಗಳಲ್ಲಿ ಲೋಕಾರ್ಪಣೆಗೆ ಮುಂದಾಗಿರುವ ಬಗ್ಗೆ ಪ್ರತಿಕ್ರಿಯೆ ನೀಡಿ ಕೆಲಸ ಸಂಪೂರ್ಣವಾದ ನಂತರವೇ ಲೋಕಾರ್ಪಣೆಯಾಗಲಿದೆ. ಈ ಬಗ್ಗೆ ಕೇಂದ್ರ ರಸ್ತೆ ಸಾರಿಗೆ ಹಾಗೂ ರಾಷ್ಟ್ರೀಯ ಹೆದ್ದಾರಿ ಸಚಿವ ನೀತಿ ಗಡ್ಕರಿ ಅವರೊಂದಿಗೆ ಇಂದು ಸಂಜೆ ಸಭೆಯಲ್ಲಿ ಚರ್ಚಿಸಿ, ಪರಿಸ್ಥಿತಿ ಪರಿಶೀಲಿಸಿ, ತೀರ್ಮಾನಕ್ಕೆ ಬರಲಾಗುವುದು ಎಂದರು.
ಸ್ಯಾಂಟ್ರೋ ರವಿ ಜೊತೆ ಬಿಜೆಪಿ ನಾಯಕರು ಸಂಪರ್ಕ ದಲ್ಲಿದ್ದಾರೆ ಎಂಬ ಪ್ರಶ್ನೆಗೆ ಉತ್ತರಿಸಿ ಜೆಡಿಎಸ್ ನಾಯಕ ಹೆಚ್.ಡಿ.ಕುಮಾರಸ್ವಾಮಿ ಅವರು ಸ್ಯಾಂಟ್ರೋ ರವಿ ಬಗ್ಗೆ ಹೇಳಿರುವುದು, ಅವರು ಯಾರು ಎಂದೂ ನನಗೆ ಗೊತ್ತಿಲ್ಲ ಎಂದರು.
[05/01, 11:07 AM] Cm Ps: ಇಂಧನ ಸಚಿವ ವಿ. ಸುನಿಲ್ ಕುಮಾರ್ ನೇತೃತ್ವದಲ್ಲಿ ಬಿಲ್ಲವ ಸಮುದಾಯದ ಮುಖಂಡರು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿಯವರನ್ನು ಇಂದು ಭೇಟಿ ಮಾಡಿ ನಾರಾಯಣ ಗುರು ನಿಗಮ ಸ್ಥಾಪಿಸುವಂತೆ ಮನವಿ ಮಾಡಿದರು.
ಈ ಸಂದರ್ಭದಲ್ಲಿ ಬಿಜೆಪಿ ರಾಜ್ಯಾಧ್ಯಕ್ಷ ನಳಿನ್ ಕುಮಾರ್ ಕಟೀಲ್, ಶಾಸಕರಾದ ರಘುಪತಿ ಭಟ್, ಹರತಾಳು ಹಾಲಪ್ಪ ಹಾಗೂ ಬಿಲ್ಲವ ಸಮುದಾಯದ ಸ್ವಾಮೀಜಿಗಳು ಮತ್ತು ಮುಖಂಡರು ಹಾಜರಿದ್ದರು.
[05/01, 11:11 AM] Cm Ps: ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರು ಇಂದು ರೇಸ್ ಕೋರ್ಸ ನಿವಾಸದಲ್ಲಿ ದಿ ಮೈಸೂರ ಎಲೆಕ್ಟ್ರಿಕಲ್ ಇಂಡಸ್ಟ್ರೀಜ್ ವತಿಯಿಂದ ಸರ್ಕಾರಕ್ಕೆ ಸಲ್ಲಿಸಲಾದ 1.55 ಕೋಟಿ ರೂ.ಗಳ ಡಿವಿಡೆಂಟ್ ಚೆಕ್ಕನ್ನು ಸ್ವೀಕರಿಸಿದರು.
ಈ ಸಂದರ್ಭದಲ್ಲಿ ಇಂಧನ ಸಚಿವ ಸುನಿಲ್ ಕುಮಾರ, ದಿ ಮೈಸೂರ ಎಲೆಕ್ಟ್ರಿಕಲ್ ಇಂಡಸ್ಟ್ರೀಜ್ ಅಧ್ಯಕ್ಷ ಕೆ.ಉದಯಕುಮಾರ ಶೆಟ್ಟಿ, ವ್ಯವಸ್ಥಾಪಕ ನಿರ್ದೇಶಕಿ ಜಿ.ಶೀಲಾ, ಪ್ರಧಾನ ವ್ಯವಸ್ಥಾಪಕ ಟಿ.ಆರ್.ಪ್ರಕಾಶ ಮತ್ತಿತರರು ಉಪಸ್ಥಿತರಿದ್ದರು.
[05/01, 12:33 PM] Cm Ps: ಚಿತ್ರದುರ್ಗದ ಜಗದ್ಗುರು ಶ್ರೀ ಮಾಚಿದೇವ ಮಹಾಸಂಸ್ಥಾನ ಮಠ, ವಿಶ್ವ ಮಾಚಿದೇವ ಸೇವಾ ಪ್ರತಿಷ್ಠಾನದ ವತಿಯಿಂದ ಏರ್ಪಡಿಸಿರುವ ಕಾಯಕ ಜನೋತ್ಸವ 2023 ಕಾರ್ಯಕ್ರಮವನ್ನು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿಯವರು ಉದ್ಘಾಟಿಸಿದರು.
ಈ ಸಂದರ್ಭದಲ್ಲಿ ಮಾಜಿ ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ, ಸಚಿವರಾದ ಗೋವಿಂದ ಕಾರಜೋಳ, ಶಾಸಕರಾದ ತಿಪ್ಪಾರೆಡ್ಡಿ, ಪೂರ್ಣಿಮಾ ಶ್ರೀನಿವಾಸ್, ಡಾ. ಶ್ರೀ ಬಸವ ಮಾಚಿದೇವ ಸ್ವಾಮೀಜಿ ಸೇರಿದಂತೆ ವಿವಿಧ ಮಠಾಧೀಶರು ಹಾಜರಿದ್ದರು.
[05/01, 2:26 PM] Cm Ps: ಚಿತ್ರದುರ್ಗದ ಜಗದ್ಗುರು ಶ್ರೀ ಮಾಚಿದೇವ ಮಹಾಸಂಸ್ಥಾನ ಮಠ, ವಿಶ್ವ ಮಾಚಿದೇವ ಸೇವಾ ಪ್ರತಿಷ್ಠಾನದ ವತಿಯಿಂದ ಏರ್ಪಡಿಸಿರುವ ಕಾಯಕ ಜನೋತ್ಸವ 2023 ಕಾರ್ಯಕ್ರಮದಲ್ಲಿ ಮಾಜಿ ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ಅವರಿಗೆ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿಯವರು ಮಡಿವಾಳ ಮಾಚಿದೇವ ಪ್ರಶಸ್ತಿ ನೀಡಿ ಸನ್ಮಾನಿಸಿದರು.
ಈ ಸಂದರ್ಭದಲ್ಲಿ ಸಚಿವರಾದ ಗೋವಿಂದ ಕಾರಜೋಳ, ಶಾಸಕರಾದ ತಿಪ್ಪಾರೆಡ್ಡಿ, ಪೂರ್ಣಿಮಾ ಶ್ರೀನಿವಾಸ್, ಡಾ. ಶ್ರೀ ಬಸವ ಮಾಚಿದೇವ ಸ್ವಾಮೀಜಿ ಸೇರಿದಂತೆ ವಿವಿಧ ಮಠಾಧೀಶರು ಹಾಜರಿದ್ದರು.
[05/01, 2:49 PM] Cm Ps: ಚಿತ್ರದುರ್ಗ: ಜನವರಿ 05: *ಮಾನ್ಯ* *ಮುಖ್ಯಮಂತ್ರಿ ಶ್ರೀ* *ಬಸವರಾಜ ಬೊಮ್ಮಾಯಿ* ಅವರು *ಜಗದ್ಗುರು ಶ್ರೀ ಮಾಚಿದೇವ* *ಮಹಾಸಂಸ್ಥಾನದ* ವತಿಯಿಂದ ಮಠದ ಆವರಣದಲ್ಲಿ ಆಯೋಜಿಸಿರುವ ಶ್ರೀಮಠದ ಶಂಕುಸ್ಥಾಪನೆಯ 14ನೇ ವಾರ್ಷಿಕೋತ್ಸವ ಮಹಾಸ್ವಾಮೀಜಿಗಳವರ *ಜಂಗಮದೀಕ್ಷೆಯ 24ನೇ ಹಾಗೂ* *39ನೇ ಜನ್ಮದಿನದ* ವಾರ್ಷಿಕೋತ್ಸವ ಮತ್ತು ಜಗದ್ಗುರು *ಡಾ. ಶ್ರೀ ಬಸವ ಮಾಚಿದೇವ* *ಮಹಾಸ್ವಾಮೀಜಿಗಳವರ 5ನೇ* ಪಟ್ಟಾಧಿಕಾರ ಮಹೋತ್ಸವದ ಅಂಗವಾಗಿ “ *ಕಾಯಕ ಜನೋತ್ಸವ -* *2023”* ಮತ್ತು *ಶ್ರೀಮಠದ ಶ್ರೀ ಮಾಚಿದೇವ* *ಮಹಾದ್ವಾರ* ಉದ್ಘಾಟಿಸಿ ಮಾತನಾಡಿದರು.
[05/01, 5:36 PM] Cm Ps: *ದೋಭೀಘಾಟ್ ಗಳಲ್ಲಿ ಆಧುನಿಕ ತಂತ್ರಜ್ಞಾನವನ್ನು ಬಳಕೆಗೆ ವಿಶೇಷ ಯೋಜನೆ: ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ*
ಚಿತ್ರದುರ್ಗ, ಜನವರಿ 05: ರಾಜ್ಯದ ನಗರಗಳಲ್ಲಿರುವ ದೋಭೀಘಾಟ್ ಗಳಲ್ಲಿ ಆಧುನಿಕ ತಂತ್ರಜ್ಞಾನವನ್ನು ಬಳಕೆ ಮಾಡಿ ದೊಡ್ಡ ಪ್ರಮಾಣದಲ್ಲಿ ಬೆಳೆಯಲು ಸರ್ಕಾರ ವಿಶೇಷವಾಗಿರುವ ಸಹಾಯಧನ, ಯೋಜನೆಯನ್ನು ಮುಂದಿನ ಬಜೆಟ್ ನಲ್ಲಿ ಘೋಷಿಸಲಾಗುವುದು ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ತಿಳಿಸಿದರು.
ಅವರು ಇಂದು ಚಿತ್ರದುರ್ಗದ ಮಾಚೀದೇವ ಮಹಾಸಂಸ್ಥಾನದ ವತಿಯಿಂದ ಆಯೋಜಿಸಿದ್ದ ಕಾಯಕ ಜನೋತ್ಸವ- 2023 ಮತ್ತು ಶ್ರೀ ಮಾಚೀದೇವ ಮಹಾದ್ವಾರ ಉದ್ಘಾಟಿಸಿ ಮಾತನಾಡಿದರು.
*ಅನುದಾನ ಹಾಗೂ ಅವಕಾಶಗಳ ಹೆಚ್ಚಳ*
ಈಗಾಗಲೇ ಸುಮಾರು 8 ದೋಭಿಘಾಟ್ ನಲ್ಲಿ ಆಧುನಿಕ ಯಂತ್ರೋಪಕರಣಗಳನ್ನು ಅಳವಡಿಸಲಾಗಿದೆ. ಆದರೆ ಇಂದಿನ ಕಾಲದಲ್ಲಿ ಮಕ್ಕಳು ಕುಲಕಸುಬನ್ನೇ ಮಾಡಲು ಸಾಧ್ಯವಿಲ್ಲ. ಬೇರೆ ಬೇರೆ ವೃತ್ತಿಯಲ್ಲಿ ತೊಡಗಬೇಕು. ಐ.ಎ.ಎಸ್., ಐ.ಪಿ.ಎಸ್ ಅಧಿಕಾರಿಯಾಗಬಹುದು, ವೈದ್ಯ, ಇಂಜಿನಿಯರ್ ಆಗಬೇಕು. ಪ್ರಗತಿಯಾಗಿ ಮುಂದುಹೋಗಬೇಕು. ಸಮಾಜವನ್ನು ಈ ರೀತಿ ತಯಾರು ಮಾಡಲು ಸ್ವಾಮೀಜಿಗಳು ಮುಂದಾಗಬೇಕು. ಈ ರೀತಿ ಬದಲಾವಣೆಯಾದಾಗ ಸಮಾಜ, ದೇಶಕ್ಕೆ ಒಳ್ಳೆಯದಾಗುತ್ತದೆ. ಮಡಿವಾಳ ಅಬಿವೃದ್ಧೀ ನಿಗಮಕ್ಕೆ ಬಜೆಟ್ ನಲ್ಲಿ ಹೆಚ್ಚಿನ ಅನುದಾನ ನೀಡಿ ಯುವಕರಿಗೆ ಸ್ವಯಂಉದ್ಯೋಗ ಮಾಡಲು, ವಿದ್ಯಾರ್ಥಿಗಳಿಗೆ ವಿಶೇಷ ಅನುದಾನ ಹಾಗೂ ಅವಕಾಶಗಳನ್ನು ಹೆಚ್ಚು ಮಾಡಲಾಗುವುದು ಎಂದರು.
*ಕಾನೂನಾತ್ಮಕ ಪರಿಶೀಲನೆ*
ಈ ಸಮಾಜವನ್ನು ಗುರುತಿಸಿದ್ದು ಬಿ.ಎಸ್.ಯಡಿಯೂರಪ್ಪನವರು. ರಾಜಕೀಯವಾಗಿ ಈ ಸಮುದಾಯವನ್ನು ಗುರುತಿಸಿ, ಸಮಾಜವನ್ನು ಭೀಷ್ಮರಂತೆ ಮುನ್ನಡೆಸುತ್ತಿದ್ದಾರೆ. ಸರ್ಕಾರಕ್ಕೆ ಕೂಡ ಸಮುದಾಯದ ಬಗ್ಗೆ ಕಾಳಜಿ ಇದೆ. ಸಂವಿಧಾನದ ಚೌಕಟ್ಟಿನಲ್ಲಿ ಈ ಸಮುದಾಯದ ಬಹು ದಿನಗಳ ಬೇಡಿಕೆಯ ಬಗ್ಗೆ ಕುಲಶಾಸ್ತ್ರೀಯ ಅಧ್ಯಯನ ನಡೆಯುತ್ತಿದೆ. ಏಳೆಂಟು ವರ್ಷ ಯಾರೂ ಏನೂ ಮಾಡಿಲ್ಲ. ಕಾನೂನಾತ್ಮಕವಾಗಿ ಸಂಪೂರ್ಣವಾಗಿ ಪರಿಶೀಲಿಸಿ ನ್ಯಾಯ ಕೊಡಿಸುವ ಕೆಲಸವನ್ನು ಮಾಡಲಾಗುವುದು. ಸಮುದಾಯದವರು ಸಂಘಟಿತರಾಗಿ ಸ್ವಚ್ಛತೆಯನ್ನು ಪಡೆದುಕೊಂಡು ಸ್ವಾಭಿಮಾನದ ಬದುಕು ಬದುಕಲು ಕ್ರಮ ಕೈಗೊಳ್ಳಾಗುವುದು. ಸರ್ಕಾರ ಈಗಾಗಲೇ ಕಾಯಕ ಯೋಜನೆಯನ್ನು ರೂಪಿಸಿದೆ. ಅನುದಾನವನ್ನು ಇದೇ ವರ್ಷ ಬಿಡುಗಡೆ ಮಾಡಲಾಗುವುದು. ಮಕ್ಕಳಿಗೆ ವಿದ್ಯಾಭ್ಯಾಕ್ಕೆ ಸ್ವಯಂ ಉದ್ಯೋಗಕ್ಕೆ ಅವಕಾಶಗಳನ್ನು ನೀಡಲಾಗಿದೆ. ಇದನ್ನು ಬಳಸಿಕೊಂಡು ಮುಂದೆ ಬರಲು ಎಲ್ಲಾ ರೀತಿಯ ಪ್ರಯತ್ನಗಳನ್ನು ಮಾಡಲಾಗುತ್ತಿದೆ ಎಂದರು.
*ಸಂಘಟಿತರಾಗಿ*
ಮಾಚೀದೇವರ ಕಾಯಕನಿಷ್ಠೆ ಮತ್ತು ರಕ್ಷಣೆ ಮಾಡಲು ವೀರತ್ವ ಎರಡೂ ಗುಣಧರ್ಮಗಳನ್ನು ಸಮಾಜದಲ್ಲಿ ಅಳವಡಿಸಿ ಸಂಘಟಿತರಾದರೆ ನ್ಯಾಯ ದೊರಕುತ್ತದೆ ಎಂದರು. ನ್ಯಾಯ ನೀಡುವ ಸಂದರ್ಬದಲ್ಲಿ ಇತರರಿಗೆ ಅನ್ಯಾಯವಾಗದಂತೆ ಎಚ್ಚರಿಕೆಯಿಂದ ಮಾಡುವ ಜವಾಬ್ದಾರಿಯನ್ನೂ ನಿಭಾಯಿಸಲಾಗುವುದು ಎಂದರು.
*ಕಾಯಕ ಸಮುದಾಯಗಳ ಒಗ್ಗಟ್ಟಿನಿಂದ ಸಾಮಾಜಿಕ ನ್ಯಾಯ* :
ಮಡಿವಾಳ ಮಾಚಿದೇವರ ಅಭೂತಪೂರ್ವ ಇತಿಹಾಸ ಇದೆ. ಬಸವಣ್ಣನವರ ಕಾಲದಲ್ಲಿ ಇದ್ದ ಮಹತ್ವದ ಸ್ಥಾನ ಹೊಂದಿದ್ದರು.ಅವರ ಕಾಯಕನಿಷ್ಠೆ ಪ್ರತಿಪಾದಿಸಿದವರು. ಮಡಿವಾಳ ಮಾಚಿದೇವ ಅವರು _354 ವಚನಗಳನ್ನು ರಚನೆ ಮಾಡಿ, ಸಮಾಜದಲ್ಲಿ ಸ್ವಾಭಿಮಾನದ ಸ್ಥಾನ ಪಡೆದುಕೊಂಡಿದ್ದರು. ಅನುಭವ ಮಂಟಪ ಪ್ರವೇಶಿಸಲು ಪರೀಕ್ಷೆ ನಡೆಯುತ್ತಿತ್ತು. ಅದನ್ನು ಮಡಿವಾಳ ಮಾಚಿದೇವ ಅವರು ನಡೆಸುತ್ತಿದ್ದರು. ಕೀಳರಿಮೆಯಿಂದ ಹೊರಬಂದು ದಿಟ್ಟತನದಿಂದ ಸ್ವಾಭಿಮಾನದ ಸ್ಥಾನವನ್ನು ಪಡೆದುಕೊಂಡಿದ್ದರು. ಬಸವಣ್ಣನವರು ಕಾಯಕವೇ ಕೈಲಾಸ ಎಂದು ಹೇಳಿದರು.ಕಾಯಕದ ಮೂಲಕ ಸ್ವರ್ಗ ಕಾಣವುದು. ಎಲ್ಲ ಕಾಯಕ ಸಮುದಾಯಗಳನ್ನು ಒಗ್ಗೂಡಿಸಿ ಬಸವಣ್ಣನವರು ಅನುಭವ ಮಂಟಪ ರಚನೆ ಮಾಡಿದರು ಎಂದರು.
*ನ್ಯಾಯ ದೊರೆಯಲಿದೆ*
ಕಾಯಕ ಮಾಡುವ ಎಲ್ಲ ಸಮುದಾಯಗಳು ಒಟ್ಟಾದಾಗ ಸಾಮಾಜಿಕ ನ್ಯಾಯ ಸಿಗುತ್ತದೆ. ಕಲ್ಯಾಣದಲ್ಲಿ ಕ್ರಾಂತಿಯಾದಾಗ ವಚನ ಸಾಹಿತ್ಯ ರಕ್ಷಣೆ ಮಾಡುವಲ್ಲಿ ಮಡಿವಾಳ ಮಾಚಿದೇವ ಪ್ರಮುಖ ಪಾತ್ರ ವಹಿಸಿದರು. ಅದಕ್ಕೆ ಅವರನ್ನು ವೀರ ಮಡಿವಾಳ ಮಾಚಿದೇವ ಅಂತ ಕರೆಯುತ್ತಾರೆ ಎಂದರು.
ಈ ಸಂದರ್ಭದಲ್ಲಿ ಸಚಿವರಾದ ಗೋವಿಂದ ಕಾರಜೋಳ, ಶಾಸಕರಾದ ತಿಪ್ಪಾರೆಡ್ಡಿ, ಪೂರ್ಣಿಮಾ ಶ್ರೀನಿವಾಸ್, ಡಾ. ಶ್ರೀ ಬಸವ ಮಾಚಿದೇವ ಸ್ವಾಮೀಜಿ ಸೇರಿದಂತೆ ವಿವಿಧ ಮಠಾಧೀಶರು ಹಾಜರಿದ್ದರು.
--
[05/01, 6:07 PM] Cm Ps: ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರು ವಿವಿಧ ಯೋಜನೆಗಳ ಪ್ರಗತಿ ಪರಿಶೀಲನೆಗಾಗಿ ರಾಜ್ಯ ಪ್ರವಾಸದಲ್ಲಿರುವ ಕೇಂದ್ರ ಭೂ ಸಾರಿಗೆ ಮತ್ತು ಹೆದ್ದಾರಿ ಸಚಿವ ನಿತಿನ್ ಗಡ್ಕರಿ ಅವರನ್ನು ಭೇಟಿಯಾಗಿ ಗೌರವಿಸಿದರು. ಲೋಕೋಪಯೋಗಿ ಸಚಿವ ಸಿ.ಸಿ. ಪಾಟೀಲ ಉಪಸ್ಥಿತರಿದ್ದರು.
[05/01, 7:09 PM] Cm Ps: ಕೇಂದ್ರ ರಸ್ತೆ ಸಾರಿಗೆ ಹಾಗೂ ರಾಷ್ಟ್ರೀಯ ಹೆದ್ದಾರಿ ಸಚಿವ ನಿತಿನ್ ಗಡ್ಕರಿಯವರ ಅಧ್ಯಕ್ಷತೆಯಲ್ಲಿ ಇಂದು ರಾಜ್ಯದಲ್ಲಿನ ರಾಷ್ಟ್ರೀಯ ಹೆದ್ದಾರಿ ಯೋಜನೆಗಳ ಕುರಿತು ಪರಿಶೀಲನಾ ಸಭೆ ಜರುಗಿತು.
ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ, ಲೋಕೋಪಯೋಗಿ ಸಚಿವ ಸಿ.ಸಿ ಪಾಟೀಲ್, ಹಾಗೂ ಲೋಕೋಪಯೋಗಿ ಇಲಾಖೆಯ ಹಿರಿಯ ಅಧಿಕಾರಿಗಳು ಸಭೆಯಲ್ಲಿ ಉಪಸ್ಥಿತರಿದ್ದರು.
Post a Comment