ಕರ್ನಾಟಕ ಉಪಚುನಾವಣೆ: ನಾಮಪತ್ರಗಳ ಪರಿಶೀಲನೆ ಪೂರ್ಣಗೊಂಡಿದ್ದು, 24 ತಿರಸ್ಕೃತಗೊಂಡ ನಂತರ 64 ಅಭ್ಯರ್ಥಿಗಳು ಕಣದಲ್ಲಿ ಉಳಿದಿದ್ದಾರೆ
ಕರ್ನಾಟಕದಲ್ಲಿ ಉಪಚುನಾವಣೆಗೆ ನಿಗದಿಯಾಗಿದ್ದ ಮೂರು ವಿಧಾನಸಭಾ ಕ್ಷೇತ್ರಗಳ ನಾಮಪತ್ರಗಳ ಪರಿಶೀಲನೆ ಇಂದು ಪೂರ್ಣಗೊಂಡಿದ್ದು, ಚುನಾವಣಾ ಆಯೋಗ 24 ನಾಮಪತ್ರಗಳನ್ನು ತಿರಸ್ಕರಿಸಿದ ಹಿನ್ನೆಲೆಯಲ್ಲಿ 64 ಅಭ್ಯರ್ಥಿಗಳು ಕಣದಲ್ಲಿ ಉಳಿದಿದ್ದಾರೆ.
ಚನ್ನಪಟ್ಟಣದಲ್ಲಿ ಅತಿ ಹೆಚ್ಚು ಅಂದರೆ 38, ಶಿಗ್ಗಾಂವ್ ನಲ್ಲಿ 19, ಸಂಡೂರಿನಲ್ಲಿ 7 ಅಭ್ಯರ್ಥಿಗಳಿದ್ದಾರೆ. ನಾಮಪತ್ರ ಹಿಂಪಡೆಯಲು ಅಕ್ಟೋಬರ್ 30 ಕೊನೆಯ ದಿನವಾಗಿದ್ದು, ನವೆಂಬರ್ 13 ರಂದು ಚುನಾವಣೆ ನಡೆಯಲಿದ್ದು, ನವೆಂಬರ್ 23 ರಂದು ಫಲಿತಾಂಶ ಪ್ರಕಟವಾಗಲಿದೆ.
Post a Comment