ಗಳೂರು: ಸಿಎಂ ಸಿದ್ದರಾಮಯ್ಯ ಅವರು ಶುಕ್ರವಾರ 16ನೇ ರಾಜ್ಯ ಬಜೆಟ್‌ ಮಂಡಿಸಿದ್ದಾರೆ. ಇದರಲ್ಲಿ ಶಿಕ್ಷಣ ಇಲಾಖೆಗೆ 45,286 ಕೋಟಿ ರೂ., ಮಹಿಳಾ, ಮಕ್ಕಳ ಕಲ್ಯಾಣ ಇಲಾಖೆ 34,955 ಕೋಟಿ ರೂ., ಇಂಧನ ಇಲಾಖೆಗೆ 26,896 ಕೋಟಿ ರೂಪಾಯಿ, ಗ್ರಾಮೀಣಾಭಿವೃದ್ಧಿ ಇಲಾಖೆಗೆ 26,735 ಕೋಟಿ ರೂ., ನೀರಾವರಿ ಇಲಾಖೆಗೆ 22181 ಕೋಟಿ ರೂ., ಆರೋಗ್ಯ, ಕುಟುಂಬ ಕಲ್ಯಾಣ ಇಲಾಖೆಗೆ 17,473 ಕೋಟಿ ರೂ.

ಸೇರಿ ಒಟ್ಟು 4,09,549 ಕೋಟಿ ರೂ. ಗಾತ್ರದ ಬಜೆಟ್‌ ಅನ್ನು ಮಂಡಿಸಿದ್ದಾರೆ. ಇನ್ನು ರಾಜ್ಯ ಬಜೆಟ್‌ನಲ್ಲಿನ ಪ್ರಮುಖ ಘೋಷಣೆಗಳ ಕುರಿತ ಮಾಹಿತಿ ಇಲ್ಲಿ ನೀಡಲಾಗಿದೆ.

ಬಜೆಟ್‌ನಲ್ಲಿನ ಪ್ರಮುಖ ಘೋಷಣೆಗಳು

  • ಕೃಷಿ ಯಾಂತ್ರೀಕರಣ ಕಾರ್ಯಕ್ರಮದಡಿ 428 ಕೋಟಿ ರೂ. ವೆಚ್ಚದಲ್ಲಿ 50 ಸಾವಿರ ರೈತರಿಗೆ ಸಹಾಯಧನ ಸೌಲಭ್ಯ.
  • ಕೃಷಿ ಭಾಗ್ಯ ಯೋಜನೆಯಡಿ 12 ಸಾವಿರ ಕೃಷಿ ಹೊಂಡ ನಿರ್ಮಾಣ
  • ರಾಜ್ಯದ GI ಟ್ಯಾಗ್‌ ಹೊಂದಿದ ಹಾಗೂ ದೇಸಿ ತೋಟಗಾರಿಕಾ ಬೆಳೆಗಳನ್ನು ಸಂರಕ್ಷಿಸಲು ಬೀಜ ಬ್ಯಾಂಕ್ ಸ್ಥಾಪನೆ.
  • ತೋಟಗಾರಿಕಾ ಬೆಳೆಗಳಿಗೆ ಹನಿ ನೀರಾವರಿಯಡಿ ೫೨,೦೦೦ ಬೆಳೆಗಾರರಿಗೆ ೪೨೬ ಕೋಟಿ ಸಹಾಯಧನ ಒದಗಿಸಲು ಕ್ರಮ
  • 37 ಲಕ್ಷ ರೈತರಿಗೆ 28,000 ಕೋಟಿ ರೂ. ಸಾಲ ವಿತರಣೆ ಗುರಿ.
  • ಎತ್ತಿನಹೊಳೆ ಯೋಜನೆ ಅಡಿ ಎಲ್ಲಾ ಎಂಟು ವಿಯರ್‌ಗಳಲ್ಲಿ ಲಭ್ಯವಾಗುವ ನೀರನ್ನು ಕಾಲುವೆಯ ಸರಪಳಿ:241 ಕಿ.ಮೀ ವರೆಗೆ ಹರಿಸಲು ಕ್ರಮ.
  • ಭದ್ರಾ ಮೇಲ್ದಂಡೆ ಯೋಜನೆ ಪೂರ್ಣಗೊಳಿಸಲು ರಾಜ್ಯ ಸರ್ಕಾರದಿಂದಲೇ ಅಗತ್ಯ ಅನುದಾನ; 2,611 ಕೋಟಿ ರೂ. ಮೊತ್ತದ ಚಿತ್ರದುರ್ಗ ಶಾಖಾ ಕಾಲುವೆ ಕಾಮಗಾರಿಯಡಿ 30 ಕೆರೆ ತುಂಬಿಸಿ 1.77 ಲಕ್ಷ ಎಕರೆ ಪ್ರದೇಶಕ್ಕೆ ನೀರಾವರಿ ಸಾಮರ್ಥ್ಯ ಸೃಜನೆ.
  • ಎತ್ತಿನಹೊಳೆ ಯೋಜನೆಯಡಿ ಮಧುಗಿರಿ ತಾಲ್ಲೂಕಿನ 45 ಹಾಗೂ ಕೊರಟಗೆರೆ ತಾಲೂಕಿನ 62 ಕೆರೆ ತುಂಬಿಸುವ ಯೋಜನೆ 553 ಕೋಟಿ ರೂ. ಮೊತ್ತದಲ್ಲಿ ಅನುಷ್ಠಾನ
  • 2025-26 ರಲ್ಲಿ 2 ಸಾವಿರ ಕೋಟಿ ರೂ. ಮೊತ್ತದ ಹೊಸ ಕಾಮಗಾರಿಗಳ ಪ್ರಾರಂಭ.
  • ಎಡಿಬಿ ನೆರವಿನಲ್ಲಿ 2,500 ಕೋಟಿ ರೂ. ವೆಚ್ಚದಲ್ಲಿ 500 ಹೊಸ ಕರ್ನಾಟಕ ಪಬ್ಲಿಕ್‌ ಶಾಲೆ ಪ್ರಾರಂಭಿಸಲು ಕ್ರಮ.
  • ಪ್ರಾಥಮಿಕ ಹಂತದಿಂದ ಪಿಯು ಹಂತದವರೆಗಿನ ಅತಿಥಿ ಶಿಕ್ಷಕರು, ಉಪನ್ಯಾಸಕರಿಗೆ ನೀಡುತ್ತಿರುವ ಮಾಸಿಕ ಗೌರವಧನ ತಲಾ 2 ಸಾವಿರ ರೂ. ಹೆಚ್ಚಳ.
  • ಬಿಸಿಯೂಟ ತಯಾರಿಕೆ ಸಿಬ್ಬಂದಿ ಗೌರವಧನ 1ಸಾವಿರ ರೂ. ಹೆಚ್ಚಳ.
  • ಪ್ರಥಮ ದರ್ಜೆ ಕಾಲೇಜುಗಳ ಬಲವರ್ಧನೆ, ಶಿಕ್ಷಣ ಸಂ‍ಸ್ಥೆಗಳಲ್ಲಿ ಉತ್ಕೃಷ್ಟತಾ ಕೇಂದ್ರಗಳ ಸ್ಥಾಪನೆಗೆ ವಿಶ್ವಬ್ಯಾಂಕ್‌ ನೆರವಿನ 2500 ಕೋಟಿ ರೂ. ವೆಚ್ಚದ ಯೋಜನೆ ಜಾರಿ.
  • ನರ ವೈಜ್ಞಾನಿಕ ಖಾಯಿಲೆಗಳಿಗೆ ಕರ್ನಾಟಕ ಮೆದುಳು ಆರೋಗ್ಯ ಉಪಕ್ರಮ (KaBHI) ಯೋಜನೆ ಈ ವರ್ಷ ಎಲ್ಲಾ ಹಂತದ ಆರೋಗ್ಯ ಕೇಂದ್ರಗಳಿಗೆ ವಿಸ್ತರಣೆ; 20 ಕೋಟಿ ರೂ. ಅನುದಾನ.
  • ಬೆಂಗಳೂರು ಉತ್ತರ ತಾಲ್ಲೂಕಿನ ವ್ಯಾಪ್ತಿಯಲ್ಲಿ 150 ಕೋಟಿ ರೂ. ವೆಚ್ಚದಲ್ಲಿ 200 ಹಾಸಿಗೆಯ ಸುಸಜ್ಜಿತ ಆಸ್ಪತ್ರೆ ನಿರ್ಮಾಣ;
  • ಕಲ್ಯಾಣ ಕರ್ನಾಟಕ ಸಂಪೂರ್ಣ ಆರೋಗ್ಯ ಅಭಿವೃದ್ಧಿ ಯೋಜನೆಯಡಿ ಒಟ್ಟು 873 ಕೋಟಿ ರೂ. ವೆಚ್ಚದಲ್ಲಿ ಯೋಜನೆಗಳ ಜಾರಿ.
  • 100 ಕೋಟಿ ರೂ. ವೆಚ್ಚದಲ್ಲಿ ಆರು ಅಸಾಂಕ್ರಾಮಿಕ ರೋಗಗಳ ತಪಾಸಣೆ ಮತ್ತು ಚಿಕಿತ್ಸೆ ನೀಡುವ ʻಗೃಹ ಆರೋಗ್ಯʼ ಯೋಜನೆ ರಾಜ್ಯಾದ್ಯಂತ ವಿಸ್ತರಣೆ.
  • ಆಶಾ ಕಾರ್ಯಕರ್ತೆಯರ ತಂಡಾಧಾರಿತ ಗೌರವಧನ 1 ಸಾವಿರ ರೂ. ಹೆಚ್ಚಳ.
  • ಬೌರಿಂಗ್‌ ಮತ್ತು ಲೇಡಿ ಕರ್ಜನ್‌ ಆಸ್ಪತ್ರೆಯಲ್ಲಿ 500 ಹಾಸಿಗೆ ಸಾಮರ್ಥ್ಯದ ಆಸ್ಪತ್ರೆಯನ್ನು 297 ಕೋಟಿ ರೂ. ವೆಚ್ಚದಲ್ಲಿ ಪೂರ್ಣಗೊಳಿಸಲು ಕ್ರಮ.
  • ಮೈಸೂರು ಮತ್ತು ಕಲಬುರಗಿ ವೈದ್ಯಕೀಯ ಕಾಲೇಜುಗಳ ವ್ಯಾಪ್ತಿಯಲ್ಲಿ 100 ಕೋಟಿ ರೂ. ವೆಚ್ಚದಲ್ಲಿ ಪ್ರಾದೇಶಿಕ ಎಂಡೋಕ್ರೈನಾಲಜಿ ಕೇಂದ್ರ ಪ್ರಾರಂಭ.
  • ತಲಾ 100 ಕೋಟಿ ರೂ. ವೆಚ್ಚದಲ್ಲಿ ಮೈಸೂರು ಮತ್ತು ಕಲಬುರಗಿಯ ವೈದ್ಯಕೀಯ ಕಾಲೇಜುಗಳಲ್ಲಿ ನಿಮ್ಹಾನ್ಸ್‌ ಮಾದರಿಯ ಸಂಸ್ಥೆಗಳ ಸ್ಥಾಪನೆ.
  • ಕೊಪ್ಪಳ ವೈದ್ಯಕೀಯ ವಿಜ್ಞಾನ ಸಂಸ್ಥೆಯ ಅಧೀನದಲ್ಲಿ 100 ಕೋಟಿ ರೂ. ವೆಚ್ಚದ ಸೂಪರ್ ಸ್ಪೆಷಾಲಿಟಿ ಆಸ್ಪತ್ರೆ ಪ್ರಾರಂಭ.
  • ರಾಜ್ಯದ ಅಂಗನವಾಡಿ ಕಾರ್ಯಕರ್ತೆಯರ ಗೌರವಧನ 1 ಸಾವಿರ ರೂ. ಹಾಗೂ ಸಹಾಯಕಿಯರ ಗೌರವಧನ 750 ರೂ. ಹೆಚ್ಚಳ.
  • ಸಕ್ಷಮ ಅಂಗನವಾಡಿ ಯೋಜನೆಯಡಿ 17,454 ಅಂಗನವಾಡಿ ಕೇಂದ್ರಗಳಿಗೆ ಹೆಚ್ಚುವರಿ ಸೌಲಭ್ಯಗಳನ್ನು ಕಲ್ಪಿಸಲು 175 ಕೋಟಿ ರೂ. ನೆರವು.
  • ಪ್ರಗತಿ ಕಾಲೋನಿ ಯೋಜನೆಯಡಿ ಕಾಮಗಾರಿಗಳನ್ನು ಪೂರ್ಣಗೊಳಿಸಲು 222 ಕೋಟಿ ರೂ. ಅನುದಾನ.
  • ಒಟ್ಟು 61 ಕ್ರೈಸ್‌ ವಸತಿ ಶಾಲೆಗಳಿಗೆ 1,292 ಕೋಟಿ ರೂ. ವೆಚ್ಚದಲ್ಲಿ ಸ್ವಂತ ಕಟ್ಟಡ ಹಾಗೂ 213 ಕೋಟಿ ರೂ. ವೆಚ್ಚದಲ್ಲಿ ಕ್ರೈಸ್‌ ವಸತಿ ಶಾಲೆಗಳಿಗೆ ಶೈಕ್ಷಣಿಕ ಮೂಲಸೌಕರ್ಯ.
  • ಸಮಾಜ ಕಲ್ಯಾಣ ಇಲಾಖೆಯಡಿ ಬರುವ ನಿಗಮಗಳಿಗೆ 2025-26 ನೇ ಸಾಲಿನಲ್ಲಿ 488 ಕೋಟಿ ರೂ. ಅನುದಾನ ನಿಗದಿ.
  • ಅರಣ್ಯ, ಅರಣ್ಯದಂಚಿನ ಹಾಡಿಗಳಲ್ಲಿ ವಾಸ ಮಾಡುತ್ತಿರುವ ಮೂಲಸೌಕರ್ಯ ವಂಚಿತ ಬುಡಕಟ್ಟುಗಳ ಜನಾಂಗದವರಿಗೆ ಮೂಲಸೌಕರ್ಯಗಳನ್ನು ಒದಗಿಸಲು 200 ಕೋಟಿ ರೂ.
  • ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆಯಡಿ ಬರುವ ನಿಗಮಗಳಿಗೆ 422 ಕೋಟಿ ರೂ. ಅನುದಾನ ಮತ್ತು ಅರೆಅಲೆಮಾರಿ ಜನಾಂಗದವರ ಕಾಲೋನಿಗಳ ಸಮಗ್ರ ಅಭಿವೃದ್ಧಿಗಾಗಿ 100 ಕೋಟಿ ರೂ. ಅನುದಾನ.
  • ಪ್ರಸ್ತುತ 250 ಮೌಲಾನಾ ಅಜಾದ್ ಆಂಗ್ಲ ಮಾಧ್ಯಮ ಮಾದರಿ ಶಾಲೆಗಳನ್ನು ಕರ್ನಾಟಕ ಪಬ್ಲಿಕ್‌ ಶಾಲೆಗಳ ಮಾದರಿಯಲ್ಲಿ 500 ಕೋಟಿ ರೂ. ವೆಚ್ಚದಲ್ಲಿ ಅಭಿವೃದ್ಧಿ. ಪ್ರಸಕ್ತ ಸಾಲಿನಲ್ಲಿ 100 ಕೋಟಿ ರೂ. ಅನುದಾನ.
  • ಅನ್ನಭಾಗ್ಯ ಯೋಜನೆಯಡಿ, ಸಹಾಯಧನದ ಬದಲಾಗಿ, 5 ಕೆ.ಜಿ. ಹೆಚ್ಚುವರಿ ಅಕ್ಕಿ ವಿತರಣೆ; 4.21 ಕೋಟಿ ಫಲಾನುಭವಿಗಳಿಗೆ ಅನುಕೂಲ.
  • 80 ವರ್ಷ ಮೇಲ್ಪಟ್ಟ ಹಿರಿಯವರು ಮಾತ್ರ ಇರುವ ಮನೆಗಳಿಗೆ ಆಹಾರ ಧಾನ್ಯಗಳನ್ನು ತಲುಪಿಸುವ ʻಅನ್ನ ಸುವಿಧಾʼ ಯೋಜನೆ 75 ವಯಸ್ಸು ಮೇಲ್ಪಟ್ಟ ಹಿರಿಯ ನಾಗರಿಕರು ಇರುವ ಮನೆಗಳಿಗೂ ವಿಸ್ತರಣೆ.
  • ರಾಜೀವ್‌ ಗಾಂಧಿ ವಸತಿ ನಿಗಮದಿಂದ ಅನುಷ್ಠಾನಗೊಳಿಸಲಾಗುತ್ತಿರುವ AHP ಮನೆಗಳ ಫಲಾನುಭವಿಗಳಿಗೆ "Interest subvention" ಯೋಜನೆ ಜಾರಿ.
  • ನೋಂದಾಯಿತ ಕಟ್ಟಡ ಕಾರ್ಮಿಕರು ಸಹಜ ಮರಣ ಹೊಂದಿದಲ್ಲಿ, ನೀಡುವ Ex-gratia ಮೊತ್ತ 1.5 ಲಕ್ಷ ರೂ.ಗೆ ಹೆಚ್ಚಳ ಮತ್ತು ಕೆಲಸದ ಸ್ಥಳದಲ್ಲಿ ಮರಣ ಹೊಂದುವ ಕಾರ್ಮಿಕರ ಅವಲಂಬಿತರಿಗೆ ನೀಡುವ ಪರಿಹಾರ ಮೊತ್ತ 8 ಲಕ್ಷ ರೂ.ಗೆ ಹೆಚ್ಚಳ.
  • ಆಯುಷ್ಮಾನ್‌ ಭಾರತ್‌ ಆರೋಗ್ಯ ಕರ್ನಾಟಕ ಯೋಜನೆಯಡಿ ನೋಂದಾಯಿತ ಮಂಡಳಿಯ ಫಲಾನುಭವಿಗಳು 5 ಲಕ್ಷ ರೂ.ಗಳ ಚಿಕಿತ್ಸೆ ಮಿತಿಯನ್ನು ಪೂರ್ಣಗೊಳಿಸಿದ್ದಲ್ಲಿ ಮಂಡಳಿಯಿಂದ ಹೆಚ್ಚುವರಿಯಾಗಿ ವೈದ್ಯಕೀಯ ವೆಚ್ಚ ಮರುಪಾವತಿಗೆ ಕ್ರಮ.
  • ಮಧುಗಿರಿ, ಇಂಡಿ, ಕಂಪ್ಲಿ, ರಾಯಚೂರು ಗ್ರಾಮೀಣ ಮತ್ತು ಸಿಂಧನೂರು ತಾಲ್ಲೂಕುಗಳಲ್ಲಿ ನೂತನ GTTC ಸ್ಥಾಪನೆ.
  • ಗ್ರಾಮೀಣ ರಸ್ತೆ ಸಂಪರ್ಕ ಜಾಲ ಅಭಿವೃದ್ಧಿ ಪಡಿಸುವ 5200 ಕೋಟಿ ರೂ. ವೆಚ್ಚದ ಪ್ರಗತಿ ಪಥ ರಸ್ತೆ ಯೋಜನೆ ಪ್ರಸ್ತುತ ಸಾಲಿನಿಂದ ಅನುಷ್ಠಾನ.
  • ಜಲ ಜೀವನ್‌ ಮಿಷನ್‌ ಯೋಜನೆಗೆ ಪ್ರಸ್ತುತ ಸಾಲಿನಲ್ಲಿ 6,050 ಕೋಟಿ ರೂ. ಅನುದಾನ.
  • ʻಕಲ್ಯಾಣ ಪಥʼ ಯೋಜನೆಯಡಿ 1 ಸಾವಿರ ಕೋಟಿ ರೂ. ಮೊತ್ತದ 286 ಕಾಮಗಾರಿ ಶೀಘ್ರ ಪೂರ್ಣ.
  • ಮೂಲಭೂತ ಸೌಕರ್ಯ ನಿರ್ವಹಣೆಗೆ ಭೌಗೋಳಿಕ ಮಾಹಿತಿ ವ್ಯವಸ್ಥೆ (GIS) ಆಧಾರಿತ ಮೊಬೈಲ್ ಮತ್ತು ವೆಬ್ ತಂತ್ರಾಂಶ ಅಭಿವೃದ್ಧಿ.
  • ಕಲ್ಯಾಣ ಕರ್ನಾಟಕ ಪ್ರದೇಶಗಳ ಅಭಿವೃದ್ಧಿಗೆ 5 ಸಾವಿರ ಕೋಟಿ ರೂ. ಮೊತ್ತದ ಯೋಜನೆ
  • ಬಿ.ಬಿ.ಎಂ.ಪಿ.ಯ ವತಿಯಿಂದ ಕೈಗೊಂಡಿರುವ ವಿವಿಧ ಸುಧಾರಣಾ ಕ್ರಮಗಳಿಂದಾಗಿ 4556 ರೂ.ಕೋಟಿಗಳ ಆದಾಯ ಗಳಿಕೆ. ಜಾಹೀರಾತು ಉಪ-ವಿಧಿಗಳು 2025ರ ಅನುಷ್ಠಾನದಿಂದ ವಾರ್ಷಿಕ 750 ಕೋಟಿ ರೂ. ಆದಾಯವನ್ನು ನಿರೀಕ್ಷಿಸಲಾಗಿದೆ.
  • 40000 ಕೋಟಿ ರೂ. ವೆಚ್ಚದಲ್ಲಿ ಬೆಂಗಳೂರು ಸುರಂಗ ಮಾರ್ಗ (‌Tunnel) ಕಾರಿಡಾರ್‌ ನಿರ್ಮಾಣಕ್ಕೆ ಸರ್ಕಾರದಿಂದ ಬಿ.ಬಿ.ಎಂ.ಪಿಗೆ 19 ಸಾವಿರ ಕೋಟಿ ರೂ. ಗ್ಯಾರಂಟಿ ಒದಗಿಸಲಾಗುವುದು.
  • ನಮ್ಮ ಮೆಟ್ರೋ ಹಂತ-3 ಯೋಜನೆಯೊಂದಿಗೆ 40.50 ಕಿ.ಮಿ. ಉದ್ದದ ಡಬಲ್‌-ಡೆಕ್ಕರ್‌ ಮೇಲು ಸೇತುವೆಯನ್ನು 8916 ಕೋಟಿ ರೂ. ವೆಚ್ಚದಲ್ಲಿ ನಿರ್ಮಾಣ.
  • "ಬ್ರ್ಯಾಂಡ್ ಬೆಂಗಳೂರು" ಯೋಜನೆಯಡಿ, 1,800 ಕೋಟಿ ರೂ. ಮೊತ್ತದ ೨೧ ಯೋಜನೆಗಳಿಗೆ ಅನುಮೋದನೆ. 413 ಕೋಟಿ ರೂ. ವೆಚ್ಚದಲ್ಲಿ "ಸಮಗ್ರ ಆರೋಗ್ಯ ಯೋಜನೆ" ಜಾರಿ.
  • ಬೆಂಗಳೂರು ನಗರದಲ್ಲಿ ವ್ಯವಸ್ಥಿತ ಒಳಚರಂಡಿ ಜಾಲ ಮತ್ತು ಎಸ್.ಟಿ.ಪಿ ನಿರ್ಮಿಸಲು 3 ಸಾವಿರ ಕೋಟಿ ರೂ. ಆರ್ಥಿಕ ನೆರವು.
  • ಮಹಾನಗರ ಪಾಲಿಕೆಗಳಲ್ಲಿ ಮೂಲ ಸೌಕರ್ಯ ಅಭಿವೃದ್ದಿಗೆ UIDF ಮೂಲಕ 600 ಕೋಟಿ ರೂ. ಅನುದಾನ.
  • ರಾಮನಗರ ಮತ್ತು ಉಲ್ಲಾಳಕ್ಕೆ 705 ಕೋಟಿ ರೂ. ವೆಚ್ಚದಲ್ಲಿ ಕುಡಿಯುವ ನೀರು ಯೋಜನೆ ಜಾರಿ.
  • ಅಮೃತ್‌-2.0 ಯೋಜನೆಯಡಿ 233 ಕುಡಿಯುವ ನೀರು ಯೋಜನೆ ಅನುಷ್ಠಾನ.
  • ಮೈಸೂರು ವಿಮಾನ ನಿಲ್ದಾಣದ ಅಭಿವೃದ್ಧಿಗೆ 319 ಕೋಟಿ ರೂ. ಅನುದಾನ ಬಿಡುಗಡೆ.
  • 2025-26ನೇ ಸಾಲಿನಲ್ಲಿ, ರೈಲ್ವೇ ಯೋಜನೆಗಳಿಗೆ 600 ಕೋಟಿ ರೂ. ಮೀಸಲು.
  • ಬೆಂಗಳೂರು ಉಪನಗರ ರೈಲ್ವೆ ಯೋಜನೆ 15,767 ಕೋಟಿ ರೂ. ವೆಚ್ಚದಲ್ಲಿ ಅನುಷ್ಠಾನ.
  • ದೇವನಹಳ್ಳಿಯಲ್ಲಿ 407 ಕೋಟಿ ರೂ. ವೆಚ್ಚದಲ್ಲಿ ಬೆಂಗಳೂರು ಸಿಗ್ನೇಚರ್ ಬಿಸಿನೆಸ್ ಪಾರ್ಕ್‌ ಅಭಿವೃದ್ಧಿ.
  • 1,850 ಕಿ.ಮೀ. ರಾಜ್ಯ ಹೆದ್ದಾರಿ ಹಾಗೂ ೨,೫೭೦ ಕಿ.ಮೀ. ಜಿಲ್ಲಾ ರಸ್ತೆಗಳನ್ನು ರೂ. ೪,೮೪೮ ಕೋಟಿ ಮೊತ್ತದಲ್ಲಿ ಅಭಿವೃದ್ಧಿಪಡಿಸಲು ಕ್ರಮ.
  • ಕೆಶಿಪ್‌-4 ಯೋಜನೆಯಡಿ 5,736 ಕೋಟಿ ರೂ. ವೆಚ್ಚದಲ್ಲಿ 875 ಕಿ.ಮೀ ಉದ್ದದ ೧೧ ರಸ್ತೆಗಳನ್ನು ಅಭಿವೃದ್ದಿಗೊಳಿಸಲು ಕ್ರಮ.
  • "ಗೃಹ ಜ್ಯೋತಿ" ಯಡಿ ಇದುವರೆಗೆ 9657 ಕೋಟಿ ರೂ. ಸಹಾಯಧನ ನೀಡಿದ್ದು, ಈ ವರ್ಷ 10,100 ಕೋಟಿ ರೂ.ಗಳನ್ನು ಒದಗಿಸಲಾಗುವುದು.
  • ನೀರಾವರಿ ಪಂಪ್‌ಸೆಟ್‌ ವಿದ್ಯುತ್‌ ಸರಬರಾಜಿಗೆ ಸಹಾಯಧನದಡಿ 33.84 ಲಕ್ಷ ಪಂಪ್‌ಸೆಟ್‌ಗಳಿಗೆ 16,021 ಕೋಟಿ ರೂ. ನೆರವು.
  • ಪಿಪಿಪಿ ಮಾದರಿಯಲ್ಲಿ 1,846 ಕೋಟಿ ರೂ. ಅಂದಾಜು ವೆಚ್ಚದಲ್ಲಿ ಬ್ಯಾಟರಿ ಶಕ್ತಿ ಶೇಖರಣಾ ವ್ಯವಸ್ಥೆ.
  • ಗಂಗಾ ಕಲ್ಯಾಣ ಯೋಜನೆಯಡಿ 25,971 ಕೊಳವೆ ಬಾವಿಗಳ ಹಾಗು 6,887 ಕುಡಿಯುವ ನೀರಿನ ಯೋಜನೆಗಳ ವಿದ್ಯುದೀಕರಣ, 1.94 ಲಕ್ಷ ವಿತರಣಾ ಪರಿವರ್ತಕಗಳ ಅಳವಡಿಕೆ.
  • 21911 ಕೋಟಿ ರೂ. ಹೂಡಿಕೆಯೊಂದಿಗೆ ಪ್ರಾರಂಭವಾದ Foxconn ಸಂಸ್ಥೆಗೆ ಮೊಬೈಲ್‌ ಫೋನ್ ಗಳ ಉತ್ಪಾದನಾ ಫಟಕಕ್ಕೆ 6970 ಕೋಟಿ ರೂ. ಮೌಲ್ಯದ ಪ್ರೋತ್ಸಾಹಕ ನೀಡಲು ಕ್ರಮ. ಇದರಿಂದ 50ಸಾವಿರ ಉದ್ಯೋಗ ಸೃಜನೆಯ ನಿರೀಕ್ಷೆ.
  • MSME ವಲಯಕ್ಕೆ ಅಗತ್ಯವಾದ ಬೆಂಬಲವನ್ನು ಒದಗಿಸುವ ಉದ್ದೇಶದಿಂದ ಪ್ರತ್ಯೇಕ MSME ನೀತಿ ಜಾರಿ.
  • ಮೈಸೂರು ವಿಶ್ವವಿದ್ಯಾಲಯದ ಕುವೆಂಪು ಕನ್ನಡ ಅಧ್ಯಯನ ಸಂಸ್ಥೆಯಲ್ಲಿರುವ 2,500 ಪ್ರಾಚೀನ ತಾಳೆಗರಿಯ ಹಸ್ತಪ್ರತಿಗಳ ಡಿಜಿಟಲೀಕರಣ ಯೋಜನೆ
  • ಮೈಸೂರಿನ ರಂಗಾಯಣದ ಕಾರ್ಯಚಟುವಟಿಕೆಗಳಿಗೆ 2 ಕೋಟಿ ರೂ. ಅನುದಾನವನ್ನು ಒದಗಿಸಲಾಗುವುದು.

Post a Comment

Previous Post Next Post