ಸೂರು: ಕ್ಯಾತಮಾರನಹಳ್ಳಿ ಮಸೀದಿ ರೀ ಓಪನ್‌ಗೆ ಮಾಜಿ ಸಂಸದ ಪ್ರತಾಪ್‌ ಸಿಂಹ ಆಕ್ಷೇಪ ವ್ಯಕ್ತಪಡಿಸಿದ್ದು, ಸಿಎಂ ಸಿದ್ದರಾಮಯ್ಯಗೆ ಸವಾಲು ಹಾಕಿದ್ದಾರೆ.

ನಾನೊಬ್ಬ ಬಿಜೆಪಿ ಕಾರ್ಯಕರ್ತನಾಗಿ ಸಿದ್ದರಾಮಯ್ಯ ಅವರಿಗೆ ಚಾಲೆಂಜ್ ಮಾಡಿ ಹೇಳುತ್ತೇನೆ. ತಾಕತ್ತಿದ್ದರೆ ಓಪನ್ ಮಾಡಿ ನೋಡಿ. ಆ ಮಸೀದಿ ರಾಜು ಹತ್ಯೆಯಾದ ಬಳಿಕ ಬಂದಾಗಿದೆ. ಈಗ ಅದನ್ನ ಓಪನ್ ಮಾಡೋಕೆ ಅಷ್ಟು ಸುಲಭವಾಗಿ ಬಿಡಲ್ಲ ಎಂದು ಸವಾಲು ಹಾಕಿದ್ದಾರೆ.

ಇನ್ನು ಸಿದ್ದರಾಮಯ್ಯ ಮೊದಲ ಬಾರಿ ಸಿಎಂ ಆಗಿದ್ದಾಗ ಗಲಭೆ ದೊಂಬಿಯಲ್ಲಿ ಭಾಗಿಯಾಗಿದ್ದ 1600 ದುರುಳರ ವಿರುದ್ಧ 175 ಪ್ರಕರಣಗಳನ್ನ ಖುಲಾಸೆ ಮಾಡಿದ್ದಾರೆ. ಆ ಎಲ್ಲಾ ಪ್ರಕರಣಗಳನ್ನು ವಾಪಸ್ ತೆಗೆದುಕೊಂಡು ತಾಲಿಬಾನ್ ಸರ್ಕಾರ ನಡೆಸುತ್ತಿದ್ದಾರೆ. ಕೊಡಗಿನಲ್ಲಿ ಕುಟ್ಟಪ್ಪ ಹತ್ಯೆ, ಬೆಂಗಳೂರು ರುದ್ರೇಶ್ ಹತ್ಯೆ, ಮೈಸೂರಿನಲ್ಲಿ ರಾಜು ಹತ್ಯೆ ಆಯಿತು. ರಾಜು ಹತ್ಯೆ ಆದ ಬಳಿಕ ಮಸೀದಿ ಬಂದ್ ಮಾಡಿಸಿದ್ದೆವು‌. ಇವತ್ತು ಸಿದ್ದರಾಮಯ್ಯ ಅವರು ಬಂದ ಮೇಲೆ ಬಂದ್ ಆಗಿರುವ ಮಸೀದಿಯನ್ನ ಓಪನ್ ಮಾಡಲು ಮುಂದಾಗಿದ್ದಾರೆ. ಈ ವಿಚಾರದ ಬಗ್ಗೆ ಚರ್ಚೆ ಮಾಡಲು ಜಿಲ್ಲಾಧಿಕಾರಿ ಕಚೇರಿಯಲ್ಲಿ ಸಭೆ ಕರೆದಿದ್ದಾರೆ. ಪೂರಕ ದಾಖಲೆಗಳನ್ನು ತೆಗೆದುಕೊಂಡು ಸಭೆಗೆ ಹಾಜರಾಗಬೇಕು ಎಂದು ಹೇಳಿದ್ದಾರೆ. ರೆಸಿಡೆನ್ಸಿ ಸೈಟ್ ನಲ್ಲಿ ಮಸೀದಿ ಮಾಡಿರುವುದೇ ಮೊದಲನೇ ತಪ್ಪು ಎಂದು ಸಿಎಂ ಸಿದ್ದರಾಮಯ್ಯ ವಿರುದ್ಧ ಕಿಡಿಕಾರಿದರು.

ಇನ್ನು ರಾಜ್ಯದಲ್ಲಿ ತಾಲಿಬಾನ್ ಸರ್ಕಾರ ನಡೀತಾ ಇದೆ. ದಾಖಲೆಯನ್ನು ನಾವು ಯಾಕೆ ಕೊಡಬೇಕು.? ಇದನ್ನ ನಾವು ಸಂಪೂರ್ಣವಾಗಿ ಖಂಡಿಸುತ್ತೇವೆ. ಯಾವುದೇ ಕಾರಣಕ್ಕೂ ಆ ಮಸೀದಿಯನ್ನು ತೆರೆಯಲು ಬಿಡಲ್ಲ. ನಿಮ್ಮ ಉದ್ದೇಶ ಏನು? ನಿಮಗೆ ಮಸ್ಲಿಂಮರ ವೋಟ್ ಬಿಟ್ಟರೆ ಬೇರೆಯವರ ವೋಟ್ ಬೇಡವಾ.? 5 ವರ್ಷ ಏನೂ ಮಾಡಕ್ಕಾಗಲ್ಲ ಅಂದುಕೊಂಡಿದ್ದೀರಾ ಎಂದು ಪ್ರಶ್ನೆ ಮಾಡಿದರು.

Post a Comment

Previous Post Next Post